ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಬಿಡುವು ನೀಡಿದ್ದ ಮಳೆ, ಇಂದು ಮತ್ತೆ ಚಳಿ ಗಾಳಿ ಸಹಿತ ಮಳೆಯಾಗುತ್ತದೆ. ಜು. 10ರಂದು 1.2 ಮಿ.ಮೀ. ಸರಾಸರಿ ಮಳೆಯಾಗಿದ್ದು, 13.25 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.
ಚನ್ನಗಿರಿ 1.4 ಮಿ.ಮೀ, ದಾವಣಗೆರೆ 1.1 ಮಿ.ಮೀ, ಹರಿಹರ 0.7 ಮಿ.ಮೀ, ಹೊನ್ನಾಳಿ 1.4 ಮಿ.ಮೀ, ಜಗಳೂರು 0.5 ಮಿ.ಮೀ, ನ್ಯಾಮತಿ 2.8 ಮಿ.ಮೀ ಮಳೆಯಾಗಿದೆ.ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.0.80 ಲಕ್ಷ ಮತ್ತು 1 ದನದ ಕೊಟ್ಟಿಗೆ ಹಾನಿಯಾಗಿದ್ದು, ರೂ.0.25 ಲಕ್ಷ ಒಟ್ಟು ರೂ. 1.05 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಜಿಲ್ಲೆಯಲ್ಲಿ ಒಟ್ಟಾರೆ ರೂ.1.05 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.