Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ನಲುಗಿದ ಬೆಳೆ; ಜನ ಜೀವನ ಅಸ್ತವ್ಯಸ್ತ-51ಲಕ್ಷ ನಷ್ಟ

ಪ್ರಮುಖ ಸುದ್ದಿ

ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ನಲುಗಿದ ಬೆಳೆ; ಜನ ಜೀವನ ಅಸ್ತವ್ಯಸ್ತ-51ಲಕ್ಷ ನಷ್ಟ

ದಾವಣಗೆರೆ: ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರಕ್ಕೆ ಜನರು ನಲುಗಿ ಹೋಗಿದ್ದು, ಬೆಳೆಗಳು ಜಲಾವೃತವಾಗಿವೆ.‌ ತೀವ್ರ ಮಳೆಗೆ ಮೆಕ್ಕೆಜೋಳೆ ಬೆಳೆಗೆ ಅತಿ ತೇವಾಂಶವಾಗಿದೆ. ಆಗಸ್ಟ್ 03 ರಂದು ಜಿಲ್ಲೆಯಲ್ಲಿ 6.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 50.95 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ.

ಚನ್ನಗಿರಿಯಲ್ಲಿ 0.8 ಮಿ.ಮೀ, ದಾವಣಗೆರೆ 1.2 ಮಿ.ಮೀ, ಹರಿಹರ 1.6 ಮಿ.ಮೀ, ಹೊನ್ನಾಳಿ 0.4 ಮಿ.ಮೀ, ಜಗಳೂರು 0.4 ಮಿ.ಮೀ, ನ್ಯಾಮತಿ 0.4 ಮಿ.ಮೀ ಮಳೆಯಾಗಿದೆ. ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 10 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ. 3.00 ಲಕ್ಷ ಮತ್ತು 40.15 ಎಕರೆ ಮೆಕ್ಕೆಜೋಳದ ಬೆಳೆ ಹಾನಿ ಸಂಭವಿಸಿದ್ದು ರೂ.6.00 ಲಕ್ಷ ಒಟ್ಟು ರೂ.9.00 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ.0.80 ಲಕ್ಷ, 3 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ. 0.90 ಲಕ್ಷ, ಒಟ್ಟು ರೂ. 1.70 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 5 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ.20.00 ಲಕ್ಷ, 1 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ. 0.50 ಲಕ್ಷ, ಒಟ್ಟು ರೂ.20.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 5 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ.2.50 ಲಕ್ಷ, 1 ದನದ ಕೊಟ್ಟಿಗೆ ಹಾನಿಯಾಗಿದ್ದು ರೂ.0.25 ಲಕ್ಷ, ಒಟ್ಟು ರೂ. 2.75 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ.6.50 ಲಕ್ಷ, 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ. 1.00 ಲಕ್ಷ, 3 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು ರೂ.7.00 ಲಕ್ಷ, 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ. 0.50 ಲಕ್ಷ ಒಟ್ಟು ರೂ. 15.00 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 5 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ. 2.00 ಲಕ್ಷ, ಅಂದಾಜು ನಷ್ಟ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟಾರೆ ರೂ.50.95 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top