Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯ ಹರಿಹರ, ಚನ್ನಗಿರಿ, ಹೊನ್ನಾಳಿಯಲ್ಲಿ ವರುಣನ ಅಬ್ಬರ; ರೈತರಲ್ಲಿ ಸಂತಸ

IMG 20230621 063950

ದಾವಣಗೆರೆ

ದಾವಣಗೆರೆ: ಜಿಲ್ಲೆಯ ಹರಿಹರ, ಚನ್ನಗಿರಿ, ಹೊನ್ನಾಳಿಯಲ್ಲಿ ವರುಣನ ಅಬ್ಬರ; ರೈತರಲ್ಲಿ ಸಂತಸ

ದಾವಣಗೆರೆ; ನಿನ್ನೆ(ಜೂ.20) ಸಂಜೆ ಜಿಲ್ಲೆಯ ಹರಿಹರ, ಚನ್ನಗಿರಿ, ಹೊನ್ನಾಳಿ ತಾಲ್ಲೂಕಿನ ಕೆಲವಡೆ ವರುಣ ಅಬ್ಬರಿಸಿದ್ದಾನೆ. ಸತತ ಎರಡು ಗಂಟೆ ವರೆಗೆ ಜೋರು ಮಳೆಯಾಗಿದ್ದು, ರೈತರ ಬಿತ್ತನೆಗೆ ಹದವಾದ ಮಳೆಯಾಗಿದೆ. ಈ ಮಳೆಯಿಂದ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಸಂತಸ ಉಂಟು ಮಾಡಿದೆ.

ಚನ್ನಗಿರಿಯಲ್ಲಿ ಸತತ 2 ಗಂಟೆಗೂ ಹೆಚ್ಚು ಕಾಲ ಮುಂಗಾರು ಮಳೆ ಸುರಿದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ13 ಸೇರಿ ಪಟ್ಟಣದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದವು. ತಗ್ಗು ಪ್ರದೇಶದಲ್ಲಿ ನೀರು ನಿಂತಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡಿದರು. ಚನ್ನಗಿರಿ ಪಟ್ಟಣದ ಕೃಷಿ ಇಲಾಖೆ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ13 ಹಾದು ಹೋಗಿದ್ದು, ಇಲ್ಲಿ ಸುಮಾರು 4ಅಡ್ಡಿಗೂ ಹೆಚ್ಚು ನೀರು ನಿಂತಿದ್ದರಿಂದ ವಾಹನ ಸವಾರು ರಸ್ತೆ ದಾಟಲು ಪರದಾಡಿದರು.

ಹರಿಹರ ತಾಲ್ಲೂಕಿನ ಹರಿಹರ ನಗರ, ಅಮರಾವತಿ, ಕೊಂಡಜ್ಜಿ, ಕೆಂಚನಹಳ್ಳಿ, ಬುಳ್ಳಾಪುರ, ಕುರುಬರಹಳ್ಳಿ ಸೇರಿ ವಿವಿಧ ಕಡೆ ಗುಡುಗು, ಸಿಡಿಲು ಸಹಿತ ಮಳೆರಾಯ ಅಬ್ಬರಿಸಿದ್ದಾನೆ. ಸಂಜೆ 6 ಗಂಟೆಗೆ ಶುರುವಾದ ಮಳೆ ಒಂದು ತಾಸು ಸತತ ಮಳೆಯಾಗಿದೆ‌ ಜಮೀನಿನಲ್ಲಿ ನೀರು ಹರಿದಾಡುವ ರೀತಿ ಮಳೆಯಾಗಿದ್ದು,ಹದ ಮಳೆಯಾಗಿದೆ. ಈ ಮಳೆಯಿಂದ ಬಿಸಿಲಿನ ತಾಪಕ್ಕೆ ಕಾದಿದ್ದ ತುಸು ಭೂಮಿ ತಂಪಾಗಿದೆ.

ಹೊನ್ನಾಳಿ- ನ್ಯಾಮತಿ ತಾಲೂಕಿನಾದ್ಯ೦ತ ಮಿ೦ಚು, ಗುಡುಗು ಸಹಿತ ಮಳೆಯಾಗಿದ್ದು, ರೈತ ಸಮುದಾಯದಲ್ಲಿ ಸಂತಸ ಮೂಡಿದೆ. ಮಳೆಗಾಗಿ ಕಾಯುತ್ತಿದ್ದ ಅವಳಿ ತಾಲೂಕು
ರೈತ ಸಮುದಾಯ ಈಗ ತುಸು ನೆಮ್ಮದಿ ತಂದಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top