Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ಜೋರು ಮಳೆ; ಸಂಜೆ ಮಳೆಗೆ ಶಾಲಾ ಮಕ್ಕಳು ಪರದಾಟ

IMG 20230711 175840

ದಾವಣಗೆರೆ

ದಾವಣಗೆರೆಯಲ್ಲಿ ಜೋರು ಮಳೆ; ಸಂಜೆ ಮಳೆಗೆ ಶಾಲಾ ಮಕ್ಕಳು ಪರದಾಟ

ದಾವಣಗೆರೆ: ನಗರದಲ್ಲಿ ಒಂದು ಗಂಟೆಗೂ ಹೆಚ್ಚು ಹೊತ್ತು ಜೋರು ಮಳೆಯಾಗಿದ್ದು ಬೈಕ್ ಸವಾರರು, ಶಾಲಾ ಮಕ್ಕಳು, ಸಂಜೆ ಆಫೀಸ್ ಮುಗಿಸಿ ಮನೆ ಸೇರಬೇಕಿದ್ದ ಮಂದಿ ಪರದಾಟ ನಡೆಸಿದರು.

ಶಾಲೆಗಳು‌ ಬಿಡುವ ವೇಳೆಗೆ ಸರಿಯಾಗಿ ಮಳೆ ಶುರುವಾಗಿದ್ದರಿಂದ ಮಕ್ಕಳು ಮನೆ ಸೇರಲು ಪರದಾಡಬೇಕಾಯಿತು. ಕೊಂಡಜ್ಜಿ ರಸ್ತೆ, ಆರ್ ಟಿಓ ಆಫೀಸ್ , ದೇವರಾಜ ಅರಸು ಬಡಾವಣೆ, ಹೊಂಡದ ಸರ್ಕಲ್, ಕಾಯಿಪೇಟೆ, ಗಡಿಯಾರ ಕಂಬ, ಪಿಬಿ ರಸ್ತೆ, ಮಾರುಕಟ್ಟೆ, ಬೇತೂರು‌ ರಸ್ತೆ, ಹದಡಿ ರಸ್ತೆ, ಹೊಸ ದಾವಣಗೆರೆಯಲ್ಲಿಯೂ ಮಳೆಯಾಗಿದೆ. ಇನ್ನೂ ಯರಗುಂಟೆ, ಆವರಗೊಳ್ಳ, ಕಕ್ಕರಗೊಳ್ಳ, ಕಡ್ಲೆಬಾಳು, ಕೊಂಡಜ್ಜಿ, ಬುಳ್ಳಾಪುರ, ಕೆಂಚನಹಳ್ಳಿ ಸೇರಿದಂತೆ ಗ್ರಾಮೀಣ ಭಾಗದಲ್ಲಿಯೂ ಜೋರು ಮಳೆಯಾಗಿದೆ.

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದೆ. ಜಿಲ್ಲೆಯ‌ ಕೆಲವು‌ ಕಡೆ ಬಿತ್ತನೆ ಪೂರ್ಣಗೊಂಡಿದ್ದು, ಇನ್ನೂ ಕೆಲವು ಪ್ರದೇಶದಲ್ಲಿ ಬಿತ್ತನೆ ಬಾಕಿ ಇದೆ. ಈಗಾಗಲೇ ಬಿತ್ತಿದ ಪೈರುಗಳಿಗೆ ಸತತ ಮಳೆಯಿಂದ ಶೀತದ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಕರಾವಳಿ, ಮಲೆನಾಡು, ಒಳನಾಡು ಭಾಗದದಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top