ದಾವಣಗೆರೆ: ಜಿಲ್ಲೆಯಲ್ಲಿ ಅ.06 ರಂದು ಸುರಿದ ಭಾರಿ ಮಳೆಗೆ 34.72 ಮಿ.ಮೀ ಸರಾಸರಿ ಮಳೆಯಾಗಿದ್ದು, ಒಟ್ಟು ರೂ.42 ಲಕ್ಷ ರೂ. ನಷ್ಟ ಸಂಭವಿಸಿದೆ.
ಚನ್ನಗಿರಿ 27.32 ಮಿ.ಮೀ., ದಾವಣಗೆರೆ 53.48 ಮಿ.ಮೀ., ಹರಿಹರ 35.90 ಮಿ.ಮೀ., ಹೊನ್ನಾಳಿ 24.10 ಮಿ.ಮೀ., ಜಗಳೂರು 32.30 ಮಿ.ಮೀ. ಮಳೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 34.72 ಮಿ.ಮೀ. ಮಳೆಯಾಗಿದೆ. ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 18 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ.8.50 ಲಕ್ಷ ಹಾಗೂ 55 ಎಕರೆ ಮೆಕ್ಕೆಜೋಳ, 2.20 ಎಕರೆ ಕಬ್ಬು ಒಟ್ಟು 57.20 ಎಕರೆ ಬೆಳೆ ಹಾನಿಯಾಗಿದ್ದು ರೂ.5 ಲಕ್ಷ ಸೇರಿದಂತೆ ಒಟ್ಟು 13.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 4 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ.1.40 ಲಕ್ಷ ಹಾಗೂ 2 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ.0.80 ಲಕ್ಷ ಸೇರಿದಂತೆ ಒಟ್ಟು ರೂ.2.20 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ.2.50 ಲಕ್ಷ, 4 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ.1.80 ಲಕ್ಷ ಹಾಗೂ 6 ಎಕರೆ ಮೆಕ್ಕೆ ಜೋಳದ ಬೆಳೆ ಹಾನಿಯಾಗಿದ್ದು ರೂ.0.80 ಲಕ್ಷ ಸೇರಿದಂತೆ ಒಟ್ಟು ರೂ.5.10 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ.0.60 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 3 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ.6 ಲಕ್ಷ, 15 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ.4.80 ಲಕ್ಷ ಮತ್ತು 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು ರೂ.5 ಲಕ್ಷ ಹಾಗೂ 10 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ.3.60 ಲಕ್ಷ, 50 ಎಕರೆ ಮೆಕ್ಕೆ ಜೋಳದ ಬೆಳೆ ಹಾನಿಯಾಗಿದ್ದು ರೂ.1.20 ಲಕ್ಷ ಸೇರಿದಂತೆ ಒಟ್ಟು 20.60 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.