Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾಯಕೊಂಡದಲ್ಲಿ ವರ್ಷದ ಮೊದಲ ಮಳೆ; ಧರೆಗೆ ತಂಪೆರೆದ ವರುಣ..!!!

ದಾವಣಗೆರೆ

ದಾವಣಗೆರೆ: ಮಾಯಕೊಂಡದಲ್ಲಿ ವರ್ಷದ ಮೊದಲ ಮಳೆ; ಧರೆಗೆ ತಂಪೆರೆದ ವರುಣ..!!!

ದಾವಣಗೆರೆ: ಬಿರು ಬಿಸಿಲ ತಾಪಮಾನದಿಂದ ತತ್ತರಿಸಿದ್ದ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ ಧರೆಗೆ ಇಳಿದಿದೆ. ಕಾದ ಕಾವಲಿಯಂತಾಗಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ. ದಾವಣಗೆರೆ ತಾಲೂಕಿನ ಮಾಯಕೊಂಡ, ಆನಗೋಡು, ಹೆಬ್ಬಾಳು ಸುತ್ತಮುತ್ತ ಬುಧವಾರ (ಏ.3) ಸಂಜೆ ವರ್ಷದ ಮೊದಲ ಮಳೆಯಾಗಿದೆ.

ಬಿಲಿನ ತೀವ್ರತೆಗೆ ಜನ-ಜಾನುವಾರು ಕುಡಿಯುವ ನೀರಿಲ್ಲ, ಒಣಗಿದ ಹಳ್ಳ-ಕೊಳ್ಳ, ನೀರಿಲ್ಲದೆ ಅಡಿಕೆ‌ ತೋಟ ಬದುಕಿಸಿಕೊಳ್ಳಲು ಪರದಾಟ ನಡೆಸುತ್ತಿದ್ದ ರೈತರಿಗೆ‌ ಜಿಲ್ಲೆಯ ವರ್ಷದ ಮಿದಲ ಮಳೆ ತುಸು ನೆಮ್ಮದಿ ನಿಟ್ಟುಸಿರು ಬಿಡುವಂತಾಯಿತು. ಆನಗೋಡು, ಹೆಬ್ಬಾಳ್, ಮಾಯಕೊಂಡ, ಹುಚ್ಚವ್ವನಹಳ್ಳಿ ಸುತ್ತಮುತ್ತ ಸಂಜೆ ಇದ್ದಕ್ಕಿದ್ದಂತೆ ಜೋರು ಗಾಳಿ ಬೀಸಿ, ದಟ್ಟಮೋಡಗಳು ಆವರಿಸಿದವು. ಮಳೆಗೆ ಕಾಯುತ್ತಿದ್ದ ಜನ, ಮಳೆ ಕಂಡು ಪುಳಕಿತರಾಗಿದ್ದರು. ಸುಮಾರು 45-50 ನಿಮಿಷ ಕಾಲ ಜೋರು ಮಳೆಯಾಗಿದೆ.

ವರ್ಷದ ಮೊದಲ ಮಳೆ ಹನಿಗಳು ಭೂಮಿಗೆ ಬಿದ್ದು ಹೊಮ್ಮಿದ ಮಣ್ಣಿನ ವಾಸನೆ ಎಲ್ಲೆಡೆ ಪಸರಿಸಿತ್ತು. ದಾವಣಗೆರೆ, ಹರಿಹರ ಭಾಗದಲ್ಲಿ ದಟ್ಟಮೋಡ ಆವರಿಸಿದರೂ, ಮಳೆಯಾಗಲಿಲ್ಲ. ಭರಮಸಾಗರದ ಕಡೆಯಲ್ಲಿಯೂ ಜೋರು ಮಳೆಯಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top