ದಾವಣಗೆರೆ: ಬಿರು ಬಿಸಿಲಿಗೆ ಸುಡುತ್ತಿದ್ದ ಧರೆಗೆ ತಂಪೆರೆದ ವರುಣ; ಬೆಣ್ಣೆನಗರಿಯಲ್ಲಿ ವರ್ಷದ ಮೊದಲ ಮಳೆ..!!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಬಿರು ಬಿಸಿಲಿನಿಂದ‌ ಸುಡುತ್ತಿದ್ದ ಧರೆಗೆ ಇಂದು (ಏ.12) ಸಂಜೆ ಬಿದ್ದ ಮಳೆ ತಂಪೆರೆದಿದೆ. ದಾವಣಗೆರೆ ನಗರಕ್ಕೆ ಇದು ವರ್ಷದ ಮೊದಲ ಮಳೆಯಾಗಿದ್ದು, ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಬೆಣ್ಣೆನಗರಿ ಜನಕ್ಕೆ ಸಂಜೆಯ ಮಳೆ ತುಸು ನಿಟ್ಟುಸಿರು ಬಿಡುವಂತೆ ಮಾಡಿದೆ.

ಸಂಜೆ 4 ಗಂಟೆಯಿಂದಲೇ ದಟ್ಟ ಮೋಡ ಆವರಿಸಿತ್ತು. ದಾವಣಗೆರೆ-ಹರಿಹರ ಅವಳಿ ನಗರ ಸೇರಿ ಸುತ್ತಮುತ್ತಲಿನ ಗ್ರಾಮದಲ್ಲಿ ಮಳೆಯಾಗಿದೆ. ಬಿಸಿಲಿನ ತಾಪಮಾನದಿಂದ ಬಸವಳಿದು ಹೋಗಿದ್ದ ಜಿಲ್ಲೆಯ ಜನರು ಮಳೆ ಆಗಮನವನ್ನೇ ಎದುರು ನೋಡುತ್ತಿದ್ದರು. ಬಿಸಿಲಿನ ತಾಪ, ಬಿಸಿ ಗಾಳಿಯಿಂದ ಸುಡುತ್ತಿದ್ದ ದಾವಣಗೆರೆಗೆ ವರ್ಷದ‌ ಮೊದಲ‌ ಮಳೆಯಿಂದ ವಾತಾವರಣ ತುಸು ತಂಪಾಗಿದೆ.‌

ಇಂದಿನಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 12 ರಿಂದ ಏ 14 ರವರೆಗೆ ಮತ್ತು 17 ಮತ್ತು 18 ರಂದು ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಏ.12,15,16 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾಗಗಳಲ್ಲಿ ಜೋರು ಮಳೆಯಾಗಲಿದೆ.

ಬೀದರ್, ಕಲಬುರ್ಗಿ, ವಿಜಯಪುರ, ಕೊಪ್ಪಳ, ರಾಯಚೂರು, ವಿಜಯಪುರ, ಗದಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾವೇರಿ , ಕೊಡಗು, ಚಿಕ್ಕಮಗಳೂರು. ಮೈಸೂರು. ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *