ದಾವಣಗೆರೆ: ಇನ್ನೂ ಮೂರ್ನಾಲ್ಕು ದಿನ ಮಳೆ ಮುನ್ಸೂಚನೆ; ಚಾಪೆ ಹಾಸಿದ ಭತ್ತ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಬಹುತೇಕ ಕಡೆ ಎರಡ್ಮೂರು ದಿನದಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ಮಳೆ ಇನ್ನೂ ಮೂರ್ನಾಲ್ಕು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ಜನಜೀವನದ ಅಸ್ತವ್ಯಸ್ತವಾಗಿದೆ.

ಚಳಿ‌ ವಾತಾವರಣ

ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ಮೇ 24ರವರೆಗೂ ಜಿಲ್ಲಾದ್ಯಂತ ಶೀತ ಗಾಳಿ, ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇವೆ. ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಬೇಸಿಗೆ ಬಿಸಿಲು ಮಾಯವಾಗಿ ಚಳಿ‌ ವಾತಾವರಣ ‌ನಿರ್ಮಾಣವಾಗಿದೆ.

ಚಾಪೆ ಹಾಸಿದ ಭತ್ತ

ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಭತ್ತ ಚಾಪೆ ಹಾಸಿದ್ದು, ಭತ್ತ ಕಟಾವಿಗೆ ವರುಣ ಅಡ್ಡಿಯಾಗಿದ್ದಾರೆ. ಜಿಲ್ಲೆಯ ದಾವಣಗೆರೆ, ಹರಿಹರ, ಚನ್ನಗಿರಿ, ಹೊನ್ನಾಳಿ,‌‌ ನ್ಯಾಮತಿ ತಾಲ್ಲೂಕಿನ ಭತ್ತ ಬೆಳೆಯಲಾಗುತ್ತಿದ್ದು, ಭತ್ತ ಕಟಾವಿಗೆ ಬಂದಿದ್ದು, ಜೋರು ಮಳೆಗೆ ಭತ್ತ ಚಾಪೆ ಹಾಸಿದೆ. ಇದರಿಂದರ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.ಒಂದೆಡೆ ಭತ್ತದ ದರ ಕುಸಿತದಿದ್ದ ಆತಂಕದಲ್ಲಿದ್ದ ರೈತರು ಈಗ ಮಳೆಯಿಂದ ಭತ್ತವನ್ನು ಕೊಯ್ಲು ಮಾಡಲು ಆಗದಂತಹ ಪರಿಸ್ಥಿತಿ ಉಂಟಾಗಿದೆ.

ಕೆಲವು ರೈತರು ಕಟಾವು ಮಾಡಿದ್ದ ಭತ್ತವನ್ನು ಒಣಗಿಸಲು ಸಹ ಮಳೆ ಬಿಡುತ್ತಿಲ್ಲ. ಮಳೆ ಸುರಿಯುತ್ತಿರುವುದರಿಂದ ಭತ್ತದ ಹುಲ್ಲು ಜಮೀನುಗಳಲ್ಲಿಯೇ ಕೊಳೆಯಲಾರಂಭಿಸಿದ್ದು, ದನಗಳಿಗೆ ಮೇವು ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *