Connect with us

Dvgsuddi Kannada | online news portal | Kannada news online

ದಾವಣಗೆರೆ: ಇದುವರೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ ; ಕೆಲ ಕಡೆ ಮಾತ್ರ ಸಾಧಾರಣ ಮಳೆ

ದಾವಣಗೆರೆ

ದಾವಣಗೆರೆ: ಇದುವರೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ ; ಕೆಲ ಕಡೆ ಮಾತ್ರ ಸಾಧಾರಣ ಮಳೆ

ದಾವಣಗೆರೆ: ಜಿಲ್ಲೆಯಲ್ಲಿ ಕೆಲ ಕಡೆ ಮಾತ್ರ ಮುಂಗಾರು ಪೂರ್ವ ಮಳೆಯಾಗಿದ್ದು, ಇದುವರೆಗೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ. ಏಪ್ರಿಲ್‌ನಲ್ಲಿ 32 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ,13 ಮಿ.ಮೀ. ಮಾತ್ರ ಮಳೆಯಾಗಿದೆ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.

ಮಳೆ ಬಿದ್ದ ಕಡೆ ರೈತರು ಮುಂಗಾರು ಬಿತ್ತನೆಗೆ ಸಿದ್ಧತೆಯಲ್ಲಿ ತೊಡಗಿದ್ದಾರೆ. ಉಳಿದ ಕಡೆಗಳಲ್ಲಿ ಅಷ್ಟೊಂದು ಹಸಿ ಮಳೆಯಾಗಿಲ್ಲ. ವಾಡಿಕೆಗಿಂತ ಇದುವರೆಗೆ ಸಾಧಾರಣ ಮಳೆಯಾಗಿದೆ. ಏಪ್ರಿಲ್‌ನಲ್ಲಿ 32 ಮಿ.ಮೀ. ವಾಡಿಕೆಗೆ 13 ಮಿ.ಮೀ. ಮಾತ್ರ ಮಳೆಯಾಗಿದೆ. ಮೇ 7ರಿಂದ 13ರ ವರೆಗೆ ವಾಡಿಕೆಯಂತೆ 10.6 ಮಿ.ಮೀ. ಮಳೆಯಾಗಬೇಕಿತ್ತು, 18.3 ಮಿ.ಮೀ. ಆಗಿದೆ. ಆದರೆ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆಯಾಗಿಲ್ಲ, ಅಲ್ಲಲ್ಲಿ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 2.43 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ ಇಲಾಖೆ ಮಾಹಿತಿ ನೀಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top