ದಾವಣಗೆರೆ: ರಾಮ್ ಅಂಡ್ ಕೋ ವೃತ್ತದ ಮರಗಳ ತೆರವಿಗೆ ಸ್ಥಳೀಯರು, ಪರಿಸರವಾದಿಗಳ ತೀವ್ರ ವಿರೋಧ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ನಗರದ ಪ್ರತಿಷ್ಠಿತ ವೃತ್ತಗಳಲ್ಲೊಂದಾದ ರಾಮ್ ಅಂಡ್ ಕೋ ವೃತ್ತದಲ್ಲಿ ಟ್ರಾಫಿಕ್ ಹಾಗೂ ಪಾರ್ಕಿಂಗ್ ಸಮಸ್ಯೆ ನಿವಾರಿಸಲು  ಮಹಾನಗರ ಪಾಲಿಕೆ  ಮರ ತೆರವುಗೊಳಿಸಲು ಮುಂದಾಗಿತ್ತು.  ಇದಕ್ಕೆ ಸ್ಥಳೀಯರು ಮತ್ತು ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ram and co 2

ರಾಮ್ ಅಂಡ್ ಕೋ ವೃತ್ತದಲ್ಲಿ ಟ್ರಾಫಿಕ್ ಸಮಸ್ಯೆ ಹಾಗೂ ಪಾರ್ಕಿಂಗ್ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ದೂರು ಬಂದ ಹಿನ್ನೆಲೆ  ಇತ್ತೀಚೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ,  ಮೇಯರ್ ಅಜಯ್ ಕುಮಾರ್, ಪಾಲಿಕೆ ಆಯುಕ್ತರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದರು. ನಂತರ ಪಾಲಿಕೆ ವತಿಯಿಂದ 8 ಮರಗಳನ್ನು ತೆರವುಗೊಳಿಸಲು ಪಾಲಿಕೆ ವತಿಯಿಂದ ಅರಣ್ಯ ಇಲಾಖೆಗೆ ಆದೇಶ ಹೊರಡಿಸಲಾಗಿತ್ತು.

ram and co

ಎರಡು ಅರಳಿ ಮರ ಸೇರಿದಂತೆ ಇತರೆ 6 ಮರ ತೆರವಿಗೆ  ಸ್ಥಳೀಯರು ಮತ್ತು ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸ್ಥಳೀಯರ ಸಹಿ ಸಂಗ್ರಹಿಸಿದ್ದು, ಯಾವುದೇ ಕಾರಣಕ್ಕೂ ಮರ ತೆರವುಗೊಳಿಸಬಾರದು ಎಂದು  ಅರಣ್ಯ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಈ ಮರಗಳು ತುಂಬಾ ಹಳೆಯ ಮರಗಳಾಗಿದ್ದು, ಈ ಮರಗಳಿಗೆ ಐತಿಹಾಸಿಕ ಹಿನ್ನೆಲೆ ಹೊಂದಿವೆ. ಹೀಗಾಗಿ ಈ ಮರಗಳನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಲು ಬಿಡುವುದಿಲ್ಲ. ಒಂದು ವೇಳೆ ತೆರವುಗೊಳಿಸಿದರೆ, ಕಾನೂನು ಹೋರಾಟ ಮಾಡುವ  ಎಚ್ಚರಿಕೆಯನ್ನು ನೀಡಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *