ದಾವಣಗೆರೆ: ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಅಂತಿಮ ಅವಕಾಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ 142 ನ್ಯಾಯಬೆಲೆ ಅಂಗಡಿಯಲ್ಲಿರುವ ಚಾಲ್ತಿಯಲ್ಲಿರುವ 58,679 ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿಗಳಲ್ಲಿನ 1,96,269 ಸದಸ್ಯರ ಪೈಕಿ 1,77,058 ಸದಸ್ಯರುಗಳ ಇ-ಕೆವೈಸಿ ಆಗಿದ್ದು, ಉಳಿದ 19,211 ಸದಸ್ಯರ ಇ-ಕೆವೈಸಿ ಮಾಡಿಸಿಕೊಳ್ಳಲು ಅಂತಿಮ ಅವಕಾಶ ಕಲ್ಪಿಸಿದೆ.

ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿಗಳಲ್ಲಿನ ಸದಸ್ಯರ ಇ-ಕೆವೈಸಿ ಮಾಡಲು ಬಾಕಿ ಇರುವ ಸದಸ್ಯರಿಗೆ ಇ-ಕೆವೈಸಿ ಮಾಡಲು ಸರ್ಕಾರವು ಅಂತಿಮ ಅವಕಾಶ ನೀಡಿದ್ದು, ಬಾಕಿ ಉಳಿದಿರುವ ಸದಸ್ಯರುಗಳು ಹಾಗೂ ಆದ್ಯತೇತರ ಪಡಿತರ ಚೀಟಿದಾರರು ಸೆ.11 ರಿಂದ 15 ರವರೆಗೆ ಪ್ರತಿ ದಿನ ಬೆಳಗ್ಗೆ 7 ರಿಂದ ರಾತ್ರಿ 8.00 ಗಂಟೆಯವರೆಗೆ ಹಾಗೂ ಸೆ.16 ರಿಂದ ಸೆ.30 ರವರೆಗೆ ಪ್ರತಿ ದಿನ ಮಧ್ಯಾಹ್ನ 12 ರಿಂದ ಸಂಜೆ 4.00 ಗಂಟೆಯವರೆಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿಯನ್ನು ಉಚಿತವಾಗಿ ಮಾಡಿಸಿಕೊಳ್ಳುವಂತೆ ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಬಿ.ಎನ್ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *