ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ 142 ನ್ಯಾಯಬೆಲೆ ಅಂಗಡಿಯಲ್ಲಿರುವ ಚಾಲ್ತಿಯಲ್ಲಿರುವ 58,679 ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿಗಳಲ್ಲಿನ 1,96,269 ಸದಸ್ಯರ ಪೈಕಿ 1,77,058 ಸದಸ್ಯರುಗಳ ಇ-ಕೆವೈಸಿ ಆಗಿದ್ದು, ಉಳಿದ 19,211 ಸದಸ್ಯರ ಇ-ಕೆವೈಸಿ ಮಾಡಿಸಿಕೊಳ್ಳಲು ಅಂತಿಮ ಅವಕಾಶ ಕಲ್ಪಿಸಿದೆ.
ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿಗಳಲ್ಲಿನ ಸದಸ್ಯರ ಇ-ಕೆವೈಸಿ ಮಾಡಲು ಬಾಕಿ ಇರುವ ಸದಸ್ಯರಿಗೆ ಇ-ಕೆವೈಸಿ ಮಾಡಲು ಸರ್ಕಾರವು ಅಂತಿಮ ಅವಕಾಶ ನೀಡಿದ್ದು, ಬಾಕಿ ಉಳಿದಿರುವ ಸದಸ್ಯರುಗಳು ಹಾಗೂ ಆದ್ಯತೇತರ ಪಡಿತರ ಚೀಟಿದಾರರು ಸೆ.11 ರಿಂದ 15 ರವರೆಗೆ ಪ್ರತಿ ದಿನ ಬೆಳಗ್ಗೆ 7 ರಿಂದ ರಾತ್ರಿ 8.00 ಗಂಟೆಯವರೆಗೆ ಹಾಗೂ ಸೆ.16 ರಿಂದ ಸೆ.30 ರವರೆಗೆ ಪ್ರತಿ ದಿನ ಮಧ್ಯಾಹ್ನ 12 ರಿಂದ ಸಂಜೆ 4.00 ಗಂಟೆಯವರೆಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿಯನ್ನು ಉಚಿತವಾಗಿ ಮಾಡಿಸಿಕೊಳ್ಳುವಂತೆ ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಬಿ.ಎನ್ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



