Connect with us

Dvgsuddi Kannada | online news portal | Kannada news online

ಸರ್ಕಾರಿ ವಸತಿ ಕಾಲೇಜ್; ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ದಾಖಲಾತಿ ಶರು; ಊಟ, ವಸತಿ, ಸಮವಸ್ತ್ರ ಉಚಿತ

residence college

ಪ್ರಮುಖ ಸುದ್ದಿ

ಸರ್ಕಾರಿ ವಸತಿ ಕಾಲೇಜ್; ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ದಾಖಲಾತಿ ಶರು; ಊಟ, ವಸತಿ, ಸಮವಸ್ತ್ರ ಉಚಿತ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು ಹಾಗೂ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ (residential college Karnataka) ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ(ವಿಜ್ಞಾನ ವಿಭಾಗ) ವಿಷಯಗಳಿಗೆ ದಾಖಲಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಪೋಷಕರ ಆದಾಯ ಮಿತಿ ರೂ.2.50 ಲಕ್ಷಗಳಿಗೆ ಮೀರಬಾರದು

ಈ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುವುದು. ಈ ಕಾಲೇಜುಗಳಲ್ಲಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ,ಕ್ರಿಶ್ಚಿಯನ್,ಜೈನ್,ಸಿಖ್, ಬೌದ್ಧ,ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75% ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಪ್ರವೇಶ ಲಭ್ಯವಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ದಾಖಲಾತಿಗಾಗಿ ಪೋಷಕರ ಆದಾಯ ಮಿತಿ ರೂ.2.50 ಲಕ್ಷಗಳಿಗೆ ಮೀರಬಾರದು.

ಅಭ್ಯರ್ಥಿಗಳು ಮೇ.17 ರೊಳಗಾಗಿ ಸೇವಾ ಸಿಂಧು ಪೋರ್ಟಲ್ Website: https://sevasindhu services.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ದೂರವಾಣಿ ಸಂ:08192-250022 ಸಂಪರ್ಕಿಸಿ.

ಕಾಲೇಜುಗಳ ವಿವರ

  • ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು, ಕೊಂಡಜ್ಜಿ,ಹರಿಹರ ತಾ|| ಮೊ:9008815296
  • ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ಬಾಲಕಿಯರ ವಸತಿ ಶಾಲೆ, ಹೊಸ ಕುಂದುವಾಡ ಗ್ರಾಮ, ಎನ್.ಹೆಚ್-13 ರಸ್ತೆ, ದಾವಣಗೆರೆ. ಮೊ:9916828601
  • ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಕಾಲೇಜು ಕೆರೆಬಿಳಚಿ, ಚನ್ನಗಿರಿ ತಾ|| ಮೊ:9483075634, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜು ಬೀಡಿ ಲೇಔಟ್, ದಾವಣಗೆರೆ ಮೊ:7022234663 ಸಂಪರ್ಕಿಸಲು ಇಲಾಖೆಯ ಅಧಿಕಾರಿ ಭಕ್ತ ಮಾರ್ಕಂಡೇಯ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top