ದಾವಣಗೆರೆ: ರಿಂಗ್ ರಸ್ತೆ ಕಾಮಗಾರಿ ಶೀಘ್ರ ಪೂರ್ಣ, ಸಂಚಾರಿ ದಟ್ಟಣೆ ಸುಧಾರಣೆಗೆ ಕ್ರಮ; ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ನಗರದಲ್ಲಿ ನಡೆಯುತ್ತಿರುವ ರಿಂಗ್ ರಸ್ತೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸುವ ಮೂಲಕ ನಗರದಲ್ಲಿನ ವಾಹನ ದಟ್ಟಣೆಯನ್ನು ತಗ್ಗಿಸಲು ಕ್ರಮ ಜರುಗಿಸಬೇಕೆಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.

ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಗಡೆ ನಗರದ ರಿಂಗ್ ರಸ್ತೆಯನ್ನು ಬೇತೂರು ರಸ್ತೆಗೆ ಸಂಪರ್ಕಿಸಲು ಈಗಾಗಲೇ ತೆರವು ಕಾರ್ಯ ಮಾಡಿದ್ದು ಆದಷ್ಟು ಬೇಗ ಕೆಲಸ ಪ್ರಾರಂಭಿಸಿ ಮುಕ್ತಾಯ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ನಗರದ ಹೊರ ವಲಯದಲ್ಲಿ ರಿಂಗ್ ರಸ್ತೆಗಳ ನಿರ್ಮಾಣ ಮಾಡುವುದರಿಂದ ನಗರದಲ್ಲಿ ಸಂಚರಿಸುವ ವಾಹನಗಳ ದಟ್ಟಣೆ ಕಡಿಮೆಯಾಗಲಿದ್ದು ಇದರಿಂದ ಮಾಲಿನ್ಯವು ಕಡಿಮೆಯಾಗುತ್ತದೆ ಎಂದರು.

ಹೆಗಡೆ ನಗರದ ಮೂಲಕ ಬೇತೂರು ರಸ್ತೆಯಿಂದ ಅವರಗೆರೆ ಮೂಲಕ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ವರ್ತುಲ ರಸ್ತೆ ನಿರ್ಮಿಸಲು ಪ್ರಾಧಿಕಾರದಿಂದ ಯೋಜಿಸಿದ್ದು, ಇದನ್ನು ತುಂಬಾ ವೈಜ್ಞಾನಿಕವಾಗಿ ಮಾಡಬೇಕು. ಈ ಭಾಗದಲ್ಲಿ ಯಾರಿಗೂ ತೊಂದರೆಯಾಗಂತೆ ಹಳ್ಳದ ಪಕ್ಕದಲ್ಲಿ ಸಿಗುವ ಸ್ಥಳದಲ್ಲಿ ಹಳ್ಳಕ್ಕೆ ಸ್ಥಳ ಬಿಟ್ಟು ರಸ್ತೆ ನಿರ್ಮಾಣ ಮಾಡಲು ಯೋಜನೆ ರೂಪಿಸಬೇಕು, ರೈತರಿಗಾಗಲಿ, ನಿವಾಸಿಗಳಿಗಾಗಲಿ ತೊಂದರೆಯಾಗದಂತೆ ಯೋಜನೆ ತಯಾರಿಸಲು ಸೂಚನೆ ನೀಡಿದರು.

ಪ್ರಾಧಿಕಾರದಿಂದ ಒಟ್ಟು 23 ವಿಷಯಗಳ ಕುರಿತು ಚರ್ಚಿಸಲಾಗಿದ್ದು ಕೆಲವು ಮಾರ್ಪಾಡಿನೊಂದಿಗೆ ಅನುಮೋದನೆಯನ್ನು ಸಭೆಯಲ್ಲಿ ನೀಡಲಾಯಿತು. ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಿಲ್ಲಾಧಿಕಾರಿ ಹಾಗೂ ಪ್ರಾಧಿಕಾರದ ಅಧ್ಯಕ್ಷರಾದ ಡಾ; ವೆಂಕಟೇಶ್ ಎಂ.ವಿ, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ.ಸಂತೋಷ್, ಪ್ರಾಧಿಕಾರದ ಆಯುಕ್ತರಾದ ಬಸವನಗೌಡ ಕೋಟೂರು, ಪಾಲಿಕೆ ಆಯುಕ್ತರಾದ ರೇಣುಕಾ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *