Connect with us

Dvgsuddi Kannada | online news portal | Kannada news online

ದಾವಣಗೆರೆ: ಜೂ.09 ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ

rto 22

ದಾವಣಗೆರೆ

ದಾವಣಗೆರೆ: ಜೂ.09 ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ

ದಾವಣಗೆರೆ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿಯ ತುಂಗಾಭದ್ರಾ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೂ.09 ರಂದು ಆಯೋಜಿಸಲಾಗಿದೆ. ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಮಜಲು ವಾಹನ ರಹದಾರಿಗಳಿಗೆ ಸಂಬಂಧಿಸಿದ ರಹದಾರಿದಾರರು ಸಲ್ಲಿಸಿರುವ ಅರ್ಜಿಗಳನ್ನು ಹಾಗೂ ಇನ್ನಿತರ ರಹದಾರಿಗಳಿಗೆ ಸಂಬಂಧಪಟ್ಟ ವಿಷಯಗಳನ್ನು ಮಂಡಿಸಲಾಗುತ್ತದೆ.

ಆದ್ದರಿಂದ ರಹದಾರಿಗಳಿಗೆ ಸಂಬಂಧಪಟ್ಟ ಅಗತ್ಯ ದಾಖಲಾತಿಗಳೊಂದಿಗೆ ರಹದಾರಿದಾರರು ಹಾಜರಾಗಬೇಕಾಗಿದೆ. ಒಂದು ವೇಳೆ ಸಭೆಗೆ ಗೈರು ಹಾಜರಾದಲ್ಲಿ ರಹದಾರಿಗೆ ಸಂಬಂಧಿಸಿದ ವಿಷಯವನ್ನು ಆಧರಿಸಿ ಸೂಕ್ತ ನಿರ್ಧಾರವನ್ನು ಅರ್ಜಿದಾರರ ಅನುಪಸ್ಥಿತಿಯಲ್ಲಿಯೇ ಕೈಗೊಳ್ಳಲಾಗುವುದು. ಈಗಾಗಲೇ ನೋಟೀಸ್ ಬರೆದು ಅಂಚೆ ಮೂಲಕ ರವಾನಿಸಲಾಗಿರುತ್ತದೆ. ನೋಟೀಸ್ ತಲುಪದ ತಹದಾರಿದಾರರು ಪ್ರಸ್ತುತ ಪತ್ರಿಕಾ ಪ್ರಕಟಣೆಯನ್ನೇ ನೋಟೀಸ್ ಎಂದು ಪರಿಗಣಿಸಿ ಸಭೆಗೆ ಹಾಜರಾಗುವಂತೆ ಶ್ರೀಧರ್ ಕೆ.ಮಲ್ಲಾಡ ಕಾರ್ಯದರ್ಶಿಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ದಾವಣಗೆರೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top