ದಾವಣಗೆರೆ: ಸಕಾಲ ಯೋಜನೆ ದಶಮಾನೋತ್ಸವ ಜಾಥಾಕ್ಕೆ ಚಾಲನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಸಕಾಲ ಯೋಜನೆ’ ಜಾರಿಯಾಗಿ ಹತ್ತು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಬುಧವಾರ ದಾವಣಗೆರೆ ತಾಲ್ಲೂಕು ಕಚೇರಿಯಿಂದ ಹಮ್ಮಿಕೊಂಡಿದ್ದ ದಶಮಾನೋತ್ಸವ ಆಚರಣೆ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ರಾಜ್ಯದ ನಾಗರಿಕರಿಗೆ ನಿಗದಿತ ಕಾಲ ಮಿತಿಯಲ್ಲಿ ಸರ್ಕಾರದ ಸೇವೆಗಳನ್ನು ಒದಗಿಸುವ ಸಕಾಲ ಯೋಜನೆಯ ಕುರಿತು ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಾಥಾಕ್ಕೆ ಚಾಲನೆ ನೀಡಲಾಗಿದೆ. ಒಟ್ಟು 91 ಇಲಾಖೆಗಳ 1115 ಸೇವೆಗಳನ್ನು ಈ ಯೋಜನೆಯಿಂದ ಈಗಾಗಲೇ ಒದಗಿಸಲಾಗುತ್ತಿದೆ. ಹಾಗಾಗಿ ಜನರು ಸಕಾಲ ಯೋಜನೆಯ ಮಾಹಿತಿ ಪಡೆದು ಸೇವೆಗಳನ್ನು ಪಡೆಯಬೇಕು ಎಂದರು.

ಜಾಥಾ ತಹಶೀಲ್ದಾರ್ ಕಛೇರಿಯಿಂದ ಪ್ರಾರಂಭವಾಗಿ ಪಿ.ಬಿ ರಸ್ತೆಯ ಮೂಲಕ ಗಾಂಧೀ ವೃತ್ತ ಮಾರ್ಗವಾಗಿ ಜಯದೇವ ವೃತ್ತದವರೆಗೆ ಸಾಗಿತು. ಇದೇ ಸಂದರ್ಭದಲ್ಲಿ ದಾವಣಗೆರೆ ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ತಹಶೀಲ್ದಾರ್ ಬಸವನಗೌಡ ಕೊಟ್ಟೂರು, ಬಿಇಒ ಅಂಬಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶಿಕ್ಷಕರು, ತಾಲ್ಲೂಕು ಕಚೇರಿ ಸಿಬ್ಬಂದಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *