Connect with us

Dvgsuddi Kannada | online news portal | Kannada news online

ದಾವಣಗೆರೆ: ಸಕಾಲ ಯೋಜನೆ ದಶಮಾನೋತ್ಸವ ಜಾಥಾಕ್ಕೆ ಚಾಲನೆ

ದಾವಣಗೆರೆ

ದಾವಣಗೆರೆ: ಸಕಾಲ ಯೋಜನೆ ದಶಮಾನೋತ್ಸವ ಜಾಥಾಕ್ಕೆ ಚಾಲನೆ

ದಾವಣಗೆರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಸಕಾಲ ಯೋಜನೆ’ ಜಾರಿಯಾಗಿ ಹತ್ತು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಬುಧವಾರ ದಾವಣಗೆರೆ ತಾಲ್ಲೂಕು ಕಚೇರಿಯಿಂದ ಹಮ್ಮಿಕೊಂಡಿದ್ದ ದಶಮಾನೋತ್ಸವ ಆಚರಣೆ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ರಾಜ್ಯದ ನಾಗರಿಕರಿಗೆ ನಿಗದಿತ ಕಾಲ ಮಿತಿಯಲ್ಲಿ ಸರ್ಕಾರದ ಸೇವೆಗಳನ್ನು ಒದಗಿಸುವ ಸಕಾಲ ಯೋಜನೆಯ ಕುರಿತು ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಾಥಾಕ್ಕೆ ಚಾಲನೆ ನೀಡಲಾಗಿದೆ. ಒಟ್ಟು 91 ಇಲಾಖೆಗಳ 1115 ಸೇವೆಗಳನ್ನು ಈ ಯೋಜನೆಯಿಂದ ಈಗಾಗಲೇ ಒದಗಿಸಲಾಗುತ್ತಿದೆ. ಹಾಗಾಗಿ ಜನರು ಸಕಾಲ ಯೋಜನೆಯ ಮಾಹಿತಿ ಪಡೆದು ಸೇವೆಗಳನ್ನು ಪಡೆಯಬೇಕು ಎಂದರು.

ಜಾಥಾ ತಹಶೀಲ್ದಾರ್ ಕಛೇರಿಯಿಂದ ಪ್ರಾರಂಭವಾಗಿ ಪಿ.ಬಿ ರಸ್ತೆಯ ಮೂಲಕ ಗಾಂಧೀ ವೃತ್ತ ಮಾರ್ಗವಾಗಿ ಜಯದೇವ ವೃತ್ತದವರೆಗೆ ಸಾಗಿತು. ಇದೇ ಸಂದರ್ಭದಲ್ಲಿ ದಾವಣಗೆರೆ ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ತಹಶೀಲ್ದಾರ್ ಬಸವನಗೌಡ ಕೊಟ್ಟೂರು, ಬಿಇಒ ಅಂಬಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶಿಕ್ಷಕರು, ತಾಲ್ಲೂಕು ಕಚೇರಿ ಸಿಬ್ಬಂದಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top