ದಾವಣಗೆರೆ: ಜಿಲ್ಲೆಯ ನ್ಯಾಮತಿ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬ್ಯಾಂಕ್ ನಲ್ಲಿ 13 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ 8 ಮಂದಿ ದರೋಡೆಕೋರರ ಮೇಲೆ ನ್ಯಾಮತಿ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ದಾವಣಗೆರೆ: ನೀರು ಸರಬರಾಜಿನಲ್ಲಿ ವ್ಯತ್ಯಯ
ಹೊನ್ನಾಳಿ ತಾಲೂಕಿನ ಅರಬಘಟ್ಟ ಕ್ರಾಸ್ ಬಳಿ ತಡರಾತ್ರಿ ಎರಡು ಕಾರುಗಳಲ್ಲಿ ಪ್ರಯಾಣಿಸುತ್ತಿದ್ದ 8 ದರೋಡೆಕೋರರ ಗ್ಯಾಂಗ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.ಉತ್ತರ ಪ್ರದೇಶ ಮೂಲದ 8 ಮಂದಿ ದರೋಡೆಕೋರರು ಎರಡು ಕಾರುಗಳಲ್ಲಿ ಸವಳಂಗ ಸೇರಿ ಕೆಲ ಕಡೆ ಬ್ಯಾಂಕ್ ದರೋಡೆಗೆ ಬಂದಿರುವ ಶಂಕೆ ಹಿನ್ನೆಲೆ ಕಾರುಗಳ ಪರಿಶೀಲನೆ ನಡೆಸಲಾಗಿತ್ತು.
ದಾವಣಗೆರೆ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಾಲಿಕೆ ಪ್ರಥಮ ದರ್ಜೆ ಸಹಾಯಕ
ಈ ವೇಳೆ ದರೋಡೆಕೋರರು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ನಾಲ್ವರು ಪರಾರಿಯಾಗಿದ್ದಾರೆ. ದರೋಡೆಕೋರರು ಪೊಲೀಸರ ಮೇಲೆ ಮಚ್ವಿನಿಂದ ದಾಳಿ ಮಾಡಿದ್ದು, ಕಾನ್ ಸ್ಟೇಬಲ್ ಒಬ್ಬರಿಗೆ ಗಾಯವಾಗಿದೆ. ತಪ್ಪಿಸಿಕೊಂಡವರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.



