Connect with us

Dvgsuddi Kannada | online news portal | Kannada news online

ದಾವಣಗೆರೆ: ಕ್ಷತ್ರೀಯ ಮರಾಠ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಕ್ಷತ್ರೀಯ ಮರಾಠ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಕ್ಷತ್ರೀಯ ಮರಾಠ ವಿದ್ಯಾ ಮತ್ತು ಕಲ್ಯಾಣಾಭಿವೃದ್ಧಿ ಟ್ರಸ್ಟ್ ವತಿಯಿಂದ 2022-23ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 75 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿ ಉತ್ತೀರ್ಣರಾದ ದಾವಣಗೆರೆ ನಗರ ವ್ಯಾಪ್ತಿಯಲ್ಲಿರುವ ಕ್ಷತ್ರಿಯಮರಾಠ ಸಮಾಜದ ಬಡ‌ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ.

ಅರ್ಹ ವಿದ್ಯಾರ್ಥಿನಿಯರು ಇಂದಿನಿಂದ ಬರುವ ಜೂನ್ 25 ರವರೆಗೆ ಟ್ರಸ್ಟ್ ಅಧ್ಯಕ್ಷ ಯಶವಂತರಾವ್ ಜಾಧವ್ ಅವರ ಜನ ಸಂಪರ್ಕ ಕಚೇರಿ,‌ಹೊಂಡದ ಸರ್ಕಲ್ ಅಥವಾ ಶ್ರೀ ಶಿವ ಛತ್ರಪತಿ ಶಿವಾಜಿ ಮಹಾರಾಜರ ಹಾಸ್ಟೆಲ್, ಹದಡಿ ರಸ್ತೆ, ದಾವಣಗೆರೆ ಅಥವಾ ಭರಣಿ ಹೋಟೆಲ್
ಮಾಲೀಕರಾದ ಜಿ.ಎಂ. ಪರಶುರಾಮರಾವ್ ಸಾಳಂಕಿ ಅಥವಾ ಶ್ರೀ ಕೃಷ್ಣಾ‌ ಭವಾನಿ ಕಲ್ಯಾಣ ಮಂಟಪ, ದೇವರಾಜ ಅರಸು ಬಡಾವಣೆ ‘ಬಿ’ ಬ್ಲಾಕ್, ಆವರಣ, ದಾವಣಗೆರೆ ಇಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 5 ರೊಳಗೆ ಸಂಘದ ಕಚೇರಿಗೆ ತಲುಪಿಸಬೇಕು. ವಿವರಗಳಿಗೆ 94480-05060, 98807-29429, 94483-09883, 98806-42030 ಸಂಪರ್ಕಿಸಿ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top