Connect with us

Dvgsuddi Kannada | online news portal | Kannada news online

ಜಗದೀಶ್ ಶೆಟ್ಟರ್ ನಮ್ಮ ಬೀಗರು; ಅವರನ್ನು ಕರೆ ತರಲು ನನ್ನ ಮಗ ಮಾತನಾಡುತ್ತಿದ್ದಾರೆ; ಬಿಜೆಪಿ 60 ಸೀಟ್ ಬರಲ್ಲ- ಶಾಮನೂರು ಶಿವಶಂಕರಪ್ಪ

ದಾವಣಗೆರೆ

ಜಗದೀಶ್ ಶೆಟ್ಟರ್ ನಮ್ಮ ಬೀಗರು; ಅವರನ್ನು ಕರೆ ತರಲು ನನ್ನ ಮಗ ಮಾತನಾಡುತ್ತಿದ್ದಾರೆ; ಬಿಜೆಪಿ 60 ಸೀಟ್ ಬರಲ್ಲ- ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಗೆ ಬಂದರೆ ಅವರಿಗೆ ಟಿಕೆಟ್ ಫಿಕ್ಸ್. ಬೀಗರು (ಜಗದೀಶ್ ಶೆಟ್ಟರ್) ಕಾಂಗ್ರೆಸ್‌ ಗೆ ಬರುವಂತೆ ನಮ್ಮ ಮಗ ಮಾತನಾಡುತ್ತಿದ್ದಾರೆ. ಕಾದು ನೋಡೋಣ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಗೆ ಬಂದರೆ ಹುಬ್ಬಳಿ ಸೆಂಟ್ರಲ್ ಟಿಕೆಟ್ ಸಿಗುತ್ತೆ.ಜಗದೀಶ್ ಶೆಟ್ಟರ್ ಅವರು ನಮ್ಮ ಬೀಗರು. ಅವರನ್ನು ನಮ್ಮ ಮಗ ಪಕ್ಷಕ್ಕೆ ಕರೆತರುತ್ತಾರೆ. ನಾನು ಅವರು ಪಕ್ಷಕ್ಕೆ ಬರುವಂತೆ ಅವರ ಜೊತೆ ಮಾತನಾಡಿಲ್ಲ. ಟಿಕೆಟ್ ಸಿಗದ ಕಾರಣಕ್ಕೆ ಅವರು ಕಾಂಗ್ರೆಸ್‌ ಗೆ ಬರಬಹುದು. ಬಿಜೆಪಿಯವರು ಇಂತಹ ಕೆಲಸ ಮಾಡಿಯೇ ಎಲ್ಲವನ್ನು ಕಳೆದುಕೊಳ್ಳುತ್ತಾರೆ. ರಾಜ್ಯದಲ್ಲಿ ಬಿಜೆಪಿಗೆ 60 ಸೀಟ್ ಸಹ ಬರುವುದಿಲ್ಲ ಎಂದರು.

ಜಗದೀಶ್ ಶೆಟ್ಟರ್ ಅವರೊಂದಿಗೆ ಪಕ್ಷದ ಹಿರಿಯ ನಾಯಕರು ಈಗಾಗಲೇ ಮಾತನಾಡಿದ್ದಾರೆ. ಲಿಂಗಾಯತ ನಾಯಕರು ಒಬ್ಬೊಬ್ಬರಾಗಿ ಕಾಂಗ್ರೆಸ್ ಗೆ ಬರ್ತಿದ್ದಾರೆ. ಮುಂದೆ ಏನಾಗುತ್ತದೆಯೋ ಕಾದು ನೋಡೋಣ ಎಂದು ತಿಳಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top