ದಾವಣಗೆರೆ: ಶಾಮನೂರು ಶಿವಶಂಕರಪ್ಪ ಶತಾಯುಷಿ ಆಗಲಿದ್ದಾರೆ. ಅವರ ಉತ್ಸಾಹ ನೋಡಿದ್ರೆ ಮತ್ತೊಂದು ಚುನಾವಣೆಗೆ ನಿಲ್ಲಬಹುದು. ಅವರು ಆಸಜ್ತಿ ತೋರಿಸಿದ್ರೆ ಕಾಂಗ್ರೆಸ್ ಪಕ್ಷ ಮತ್ತೆ ಟಿಕೆಟ್ ನೀಡಲು ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
95 ವರ್ಷದ ಹಿರಿಯ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ 95 ನೇ ಜನ್ಮದಿನ ಹಿನ್ನೆಲೆ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದರು.
ಅಂತರ್ಜಾತಿ ವಿವಾಹದಿಂದ ಜಾತ್ಯತೀತ ಸಮಾಜ ನಿರ್ಮಾಣ
ಸಮಾಜದಲ್ಲಿ ಲಿಂಗ ತಾರತಮ್ಯ, ಜಾತಿ ತಾರತಮ್ಯ ನಿವಾರಣೆಯಾಗಬೇಕಾದರೆ ಸಾಮೂಹಿಕ ವಿವಾಹಗಳು, ಅಂತರಜಾತಿ ವಿವಾಹಗಳು ಹೆಚ್ಚು ನಡೆಯಬೇಕು.ಅಂತರ್ಜಾತಿ ಸಾಮೂಹಿಕ ವಿವಾಹದಿಂದ ಜಾತ್ಯತೀತ ಸಮಾಜ ನಿರ್ಮಾಣವಾಗಲಿದೆ. ಜಾತಿ, ವರ್ಗ ಇಲ್ಲದ ಸಮಾಜ ನಿರ್ಮಾಣ ಬಸವಣ್ಣ ಮತ್ತು ಬಸವಾದಿ ಶರಣರ ಆಶಯವಾಗಿತ್ತು ಎಂದರು.
ಗ್ಯಾರಂಟಿ ಯೋಜನೆಯಿಂದ ಅರ್ಥಿಕತೆ ವೃದ್ಧಿ
ಸರ್ಕಾರ ಮಹಿಳೆಯರ ಆರ್ಥಿಕ, ಸಾಮಾಜಿಕವಾಗಿ ವೃದ್ಧಿಗೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಕಾರ್ಯಕ್ರಮ ರೂಪಿಸಿ ಜಾರಿಗೆ ತರುತ್ತಿದೆ ಎಂದರು.