ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ವತಿಯಿಂದ 2025-26ನೇ ಸಾಲಿಗೆ ರಾಜ್ಯದ ಪ್ರತಿಭಾನ್ವಿತ ಬಡವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕಾ ಅವಧಿ ಜುಲೈ 31ರವರೆಗೆ ವಿಸ್ತರಿಸಲಾಗಿದೆ.

ಟ್ರಸ್ಟ್ ವತಿಯಿಂದ 13 ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಹಿಂದಿನ ವರ್ಷ ಸುಮಾರು 900 ಹಿಂದುಳಿದ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ. ಈ ಬಾರಿ ಐಟಿಐ, ಡಿಪ್ಲೊಮಾ, ಪದವಿ, ವೃತ್ತಿ ಶಿಕ್ಷಣ ಕೋರ್ಸ್, ಕಾನೂನು ಪದವಿ, ಮ್ಯಾನೇಜ್ ಮೆಂಟ್ ಮತ್ತು ಇತರೆ ವೃತ್ತಿ ಶಿಕ್ಷಣ ಕಾಲೇಜುಗಳಲ್ಲಿ 2025 -26 ರ ಶೈಕ್ಷಣಿಕ ಅವಧಿಯಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಆಯಾ ಕಾಲೇಜುಗಳ ವಾರ್ಷಿಕ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿವೇತನ ನೀಡಲಾಗುವುದು. ವಿದ್ಯಾರ್ಥಿ ವೇತನ ನಿರೀಕ್ಷಿಸುವ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾನ್ವಿತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಯಾ ಶಾಲೆ- ಕಾಲೇಜುಗಳ ಮುಖ್ಯಸ್ಥರ ಮೂಲಕ ಪ್ರಮಾಣಪತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಮತ್ತು ವಿವರಗಳಿಗಾಗಿ ಟ್ರಸ್ಟ್‌ನ ವೆಬ್‌ಸೈಟ್: www.ssjanakalyan trust.org  ಸಂಪರ್ಕಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು.31 ಕಡೆಯ ದಿನ ಎಂದು ಟ್ರಸ್ಟ್ ಕಾರ್ಯದರ್ಶಿ ಡಾ.ಅಥಣಿ ವೀರಣ್ಣ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *