ದಾವಣಗೆರೆ: ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ವತಿಯಿಂದ 2025-26ನೇ ಸಾಲಿಗೆ ರಾಜ್ಯದ ಪ್ರತಿಭಾನ್ವಿತ ಬಡವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕಾ ಅವಧಿ ಜುಲೈ 31ರವರೆಗೆ ವಿಸ್ತರಿಸಲಾಗಿದೆ.
ಟ್ರಸ್ಟ್ ವತಿಯಿಂದ 13 ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಹಿಂದಿನ ವರ್ಷ ಸುಮಾರು 900 ಹಿಂದುಳಿದ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ. ಈ ಬಾರಿ ಐಟಿಐ, ಡಿಪ್ಲೊಮಾ, ಪದವಿ, ವೃತ್ತಿ ಶಿಕ್ಷಣ ಕೋರ್ಸ್, ಕಾನೂನು ಪದವಿ, ಮ್ಯಾನೇಜ್ ಮೆಂಟ್ ಮತ್ತು ಇತರೆ ವೃತ್ತಿ ಶಿಕ್ಷಣ ಕಾಲೇಜುಗಳಲ್ಲಿ 2025 -26 ರ ಶೈಕ್ಷಣಿಕ ಅವಧಿಯಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಆಯಾ ಕಾಲೇಜುಗಳ ವಾರ್ಷಿಕ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿವೇತನ ನೀಡಲಾಗುವುದು. ವಿದ್ಯಾರ್ಥಿ ವೇತನ ನಿರೀಕ್ಷಿಸುವ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾನ್ವಿತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಯಾ ಶಾಲೆ- ಕಾಲೇಜುಗಳ ಮುಖ್ಯಸ್ಥರ ಮೂಲಕ ಪ್ರಮಾಣಪತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಮತ್ತು ವಿವರಗಳಿಗಾಗಿ ಟ್ರಸ್ಟ್ನ ವೆಬ್ಸೈಟ್: www.ssjanakalyan trust.org ಸಂಪರ್ಕಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು.31 ಕಡೆಯ ದಿನ ಎಂದು ಟ್ರಸ್ಟ್ ಕಾರ್ಯದರ್ಶಿ ಡಾ.ಅಥಣಿ ವೀರಣ್ಣ ತಿಳಿಸಿದ್ದಾರೆ.