ದಾವಣಗೆರೆ: ಕಾಂತಾರ ಸಿನಿಮಾ ವೀಕ್ಷಿಸಿದ ಶಾಮನೂರು ಶಿವಶಂಕರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ದೇಶದಾದ್ಯಂತ ಕನ್ನಡದ ಕಾಂತಾರ ಸಿನಿಮಾ ಯಶಸ್ಸು ಗಳಿಸಿದೆ. ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿದ ಸಿನಿಮಾಗೆ ದೇಶದ ಎಲ್ಲ ಭಾಷೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಕನ್ನಡದ ಹೆಮ್ಮೆಯ ಚಿತ್ರ ನೋಡಲು ಜನರು ಗುಂಪು ಗುಂಪಾಗಿ ಬರುತ್ತಿದ್ದಾರೆ. ನಿನ್ನೆಯಷ್ಟೇ ದಾವಣಗೆರೆಯ ಜಿಲ್ಲಾಧಿಕಾರಿ, ಎಸ್ಪಿ ಮತ್ತು ಪೊಲೀಸ್ ಸಿಬ್ಬಂದಿ ಸಿನಿಮಾವನ್ನು ಕುಟುಂಬ ಸಮೇತರಾಗಿ ಬಂದು ಸಿನಿಮಾ ವೀಕ್ಷಿಸಿದ್ದರು. ಇದೀಗ ಶಾಸಕ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ‌ ಅವರು ಕೂಡ ಕಾಂತಾರ ಸಿನಿಮಾ ವೀಕ್ಷಿಸಿದ್ದಾರೆ.

ದಾವಣಗೆರೆ ನಗರದ ಎಸ್​ಎಸ್​ ಮಾಲ್​ನಲ್ಲಿ ಶಾಮನೂರು ಶಿವಶಂಕರಪ್ಪ ಸಿನಿಮಾ ವೀಕ್ಷಣೆ ಮಾಡಿದರು. ಅವರೊಂದಿಗೆ ಅಥಣಿ ವೀರಣ್ಣ, ಡಾ.ದೀಪಕ್ ಬೋಂದಾಡೆ, ಡಿ.ಬಸವರಾಜ್, ಡಾ.ಎಂ.ಜಿ.ಈಶ್ವರಪ್ಪ, ಎಸ್.ಕೆ.ವೀರಣ್ಣ, ಬಸವರಾಜ್, ದಿನೇಶ್ ಕೆ ಶೆಟ್ಟಿ, ಅಲಕಾನಂದ ರಾಮದಾಸ್, ಲಯನ್ ಸತೀಶ್, ಕಾಂಗ್ರೆಸ್ ಪಕ್ಷದ ಮಹಾನಗರ ಪಾಲಿಕೆಯ ಸದಸ್ಯರು, ಮುಖಂಡರು ಚಿತ್ರ ವೀಕ್ಷಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *