Connect with us

Dvgsuddi Kannada | online news portal | Kannada news online

ದಾವಣಗೆರೆ: ಒಳಪಂಗಡಗಳ ಹೆಸರಿನಲ್ಲಿ ಸ್ವಾಮೀಜಿಗಳೇ ವೀರಶೈವ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ; ಶಾಮನೂರು ಶಿವಶಂಕರಪ್ಪ

sham

ಪ್ರಮುಖ ಸುದ್ದಿ

ದಾವಣಗೆರೆ: ಒಳಪಂಗಡಗಳ ಹೆಸರಿನಲ್ಲಿ ಸ್ವಾಮೀಜಿಗಳೇ ವೀರಶೈವ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ; ಶಾಮನೂರು ಶಿವಶಂಕರಪ್ಪ

ದಾವಣಗೆರೆ: ವೀರಶೈವ ಮಹಾಸಭಾದಿಂದ ಸಮಾಜದ ಎಲ್ಲ ಒಳ ಪಂಗಡ ಒಗ್ಗೂಡಿಸುವ ಕೆಲಸ ನಡೆಯುತ್ತಿದ್ದು, ಒಳಪಂಗಡ ಮರೆತು ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು. ಇದರಿಂದ ಸಮಾಜಕ್ಕೆ ಶಕ್ತಿ ಬರಲಿದೆ ಎಂಬುದು ನಮ್ಮ ಆಶಯ. ಆದರೆ, ಸ್ವಾಮೀಜಿಗಳೇ ಒಳಪಂಗಡಗಳ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ವೀರಶೈವ ಲಿಂಗಾಯತ‌ ಮಹಾ ಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.

ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ, ಹರ ಸೇವಾ ಸಂಸ್ಥೆ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ರಾಜ್ಯದ ಸಮಗ್ರ ವೀರಶೈವ ಲಿಂಗಾಯತ ಸಮಾಜಕ್ಕೆ ಒಬಿಸಿ ಮೀಸಲಾತಿ ಕಲ್ಪಿಸಬೇಕು ಎಂಬುದು ವೀರಶೈವ ಲಿಂಗಾಯತ ಮಹಾಸಭಾದ ಪ್ರಮುಖ ಬೇಡಿಕೆ. ಚುನಾವಣೆಯಲ್ಲಿ ಮೂರು ಪಕ್ಷಗಳಿಂದ ಆಯ್ಕೆಯಾದ ಸಮಾಜದ 74 ಶಾಸಕರಿಗೆ ಮಹಾಸಭಾದಿಂದ ಸನ್ಮಾನ ಕಾರ್ಯಕ್ರಮ ನಡೆಸುವ ಮೂಲಕ ಒಬಿಸಿ ಮೀಸಲಾತಿ ಹೋರಾಟಕ್ಕೆ ಬೆಂಬಲಿಸಲು ತಿಳಿಸಲಾಗಿದೆ ಎಂದು ಹೇಳಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top