Connect with us

Dvgsuddi Kannada | online news portal | Kannada news online

ನನಗೂ ಸಿಎಂ ಆಗುವ ಆಸೆ ಇದೆ; ನನ್ನ ಬಳಿ ಹಣ, ಶಕ್ತಿ ಇಲ್ಲವೇ..?: ಶಾಮನೂರು ಶಿವಶಂಕರಪ್ಪ

ಪ್ರಮುಖ ಸುದ್ದಿ

ನನಗೂ ಸಿಎಂ ಆಗುವ ಆಸೆ ಇದೆ; ನನ್ನ ಬಳಿ ಹಣ, ಶಕ್ತಿ ಇಲ್ಲವೇ..?: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ದಾವಣಗೆರೆ ದಕ್ಷಿಣದಿಂದ ಸ್ಪರ್ಧಿಸುತ್ತೇನೆ. ನನ್ನ ಬಳಿಯೂ ಹಣ, ಶಕ್ತಿಯಿದೆ. ಯಾಕೆ ನನಗೆ ಸಿಎಂ ಆಗುವ ಶಕ್ತಿಯಿಲ್ಲವೇ? ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಾತ್ರ ಮುಖ್ಯಮಂತ್ರಿ ಅಭ್ಯರ್ಥಿಗಳಲ್ಲ, ನಾನು ಕೂಡ ಸಿಎಂ ಹುದ್ದೆಯ ಆಕಾಂಕ್ಷಿ ಎಂದರು.

ದಾವಣಗೆರೆ ಉತ್ತರ ಕ್ಷೇತ್ರದಿಂದ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪರ್ಧೆ ವಿಚಾರವಾಗಿ ನನ್ನ ಬಳಿ ಮಾತನಾಡಿಲ್ಲ. ಬಿಜೆಪಿ ನಾಯಕರು ಅವರ ಸ್ಪರ್ಧೆ ಬಗ್ಗೆ ನನ್ನ ಬಳಿ ಯಾಕೆ ಚರ್ಚೆ ಮಾಡುತ್ತಾರೆ. ಮುಂದಿನ ತಿಂಗಳು 16ಕ್ಕೆ ನನ್ನ ಮೊಮ್ಮಗಳ ಮದುವೆ ಇದೆ. ಸಿಎಂ ಬೊಮ್ಮಾಯಿ ಕೂಡ ಬರುತ್ತಾರೆ ಎಂದು ಹೇಳಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top