Connect with us

Dvgsuddi Kannada | online news portal | Kannada news online

ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡುವ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ

ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡುವ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಕುರಿ, ಮೇಕೆಗಳನ್ನು ಹೊಂದಿರುವ ಅರ್ಹ ವಲಸೆ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ  ನೀಡುವ ತೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಸಂಚಾರಿ ಕುರಿಗಾಹಿಗಳು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಂದ ಅರ್ಜಿಗಳನ್ನು ಪಡೆದು, ವಲಸೆ ಕುರಿಗಾರರು ಎಂಬುದಕ್ಕೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳಿಂದ ಮಹಜರ್ ಪ್ರಮಾಣ ಪತ್ರ ಲಗತ್ತಿಸಿ ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿಗಳು, ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ದಾವಣಗೆರೆ ಇವರನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top