Connect with us

Dvgsuddi Kannada | online news portal | Kannada news online

ದಾವಣಗೆರೆ; ಶಿವ ಸಹಕಾರಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳ ದಾಳಿ; ಮಹತ್ವದ ದಾಖಲೆ ಪರಿಶೀಲನೆ

ದಾವಣಗೆರೆ

ದಾವಣಗೆರೆ; ಶಿವ ಸಹಕಾರಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳ ದಾಳಿ; ಮಹತ್ವದ ದಾಖಲೆ ಪರಿಶೀಲನೆ

ದಾವಣಗೆರೆ : ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಗರದ ಚಾಮರಾಜಪೇಟೆ ಸರ್ಕಲ್ ನಲ್ಲಿರುವ ಶಿವ ಸಹಕಾರಿ ಬ್ಯಾಂಕ್ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿ ಮೂಲದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಂದ ಕಳೆದ ಎರಡು ದಿನಗಳಿಂದ ಪರಿಶೀಲನೆ ನಡೆದಿದೆ. ನಾಲ್ಕು ಇನ್ನೊವಾ ಕಾರ್ ನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ತಪಾಸಣೆ ನಡೆದಿದ್ದಾರೆ. ಒಟ್ಟು 12 ಜನ ಐಟಿ ಅಧಿಕಾರಿಗಳಿಂದ ಕಳೆದ ಎರಡು ದಿನಗಳಿಂದ ಪರಿಶೀಲನೆ ನಡೆದಿದೆ.

ಚುನಾವಣಾ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಯುವ ಹಿನ್ನೆಲೆ ಪರಿಶೀಲನೆ ನಡೆದಿದೆ ಎಲ್ಲಲಾಗಿದೆ. ನಿನ್ನೆ (ಏ.1) ತಡರಾತ್ರಿ ವರೆಗೂ ಪರಿಶೀಲಿಸಿ ಕೆಲ ದಾಖಲೆಗಳನ್ನು ಅಧಿಕಾರಿಗಳು ಕೊಂಡೊಯ್ದರು.ಒಟ್ಟು 12 ಜನ ಐಟಿ ಅಧಿಕಾರಿಗಳು ಧಾವಿಸಿದ್ದು, ಬ್ಯಾಂಕ್ ಲಾಕರ್ಗಳನ್ನು ಚೆಕ್ ಮಾಡಿದ್ದಾರೆ. ಮೊನ್ನೆ ಶುಕ್ರವಾರ ಹಾಗೂ ನಿನ್ನೆ ಶನಿವಾರ ರಾತ್ರಿ ಹತ್ತು ಗಂಟೆಯವರೆಗೆ ಬ್ಯಾಂಕ್ ನಲ್ಲಿ ತಪಾಸಣೆ ಮಾಡಿದ ಅಧಿಕಾರಿಗಳು ಎಲ್ಲಾ ರೀತಿಯ ದಾಖಲೆಯನ್ನು ಪರಿಶೀಲನೆ ನಡೆಸಿದ್ದಾರೆ.ಬ್ಯಾಂಕ್ ನಿಂದ ಹೋಗುವಾಗ ಮೂರು ಬ್ರೀಫ್ ಕೇಸ್ ಗಳಲ್ಲಿ ದಾಖಲೆ ತೆಗೆದುಕೊಂಡು ಹೋಗಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top