ದಾವಣಗೆರೆ: ದಾವಣಗೆರೆ ಮೂಲದ ವೀರ ಯೋಧನೊಬ್ಬ (soldier) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ಆಂಧ್ರ ಪ್ರದೇಶದ ವಿಜಯವಾಡದ ಬಳಿ ನಡೆದಿದೆ.
ದಾವಣಗೆರೆ: ಜಿಲ್ಲೆಯ ಮಾಯಕೊಂಡದಲ್ಲಿ ವರ್ಷದ ಮೊದಲ ಮಳೆ
ದಾವಣಗೆರೆ ತಾಲೂಕಿನ ಕೈದಾಳೆ ಗ್ರಾಮದ ಉಮೇಶ (34) ಆತ್ಮಹತ್ಯೆ ಮಾಡಿಕೊಂಡ ಯೋಧ. ವಿಜಯವಾಡದ ಬಳಿ ಸೋಮವಾರ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯೋಧ ಉಮೇಶ ಸಾವಿಗೆ ಶರಣಾಗಿದ್ದಾನೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ದಾವಣಗೆರೆ: ತುಮ್ಕೋಸ್ ನೂತನ ಅಧ್ಯಕ್ಷರಾಗಿ ಎಚ್.ಎಸ್.ಶಿವಕುಮಾರ್ ಅವಿರೋಧ ಆಯ್ಕೆ
ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಈ ಕೃತ್ಯ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಛತ್ತೀಸ್ಘಡದ ಕೊಂಟಾ ಬೆಟಾಲಿಯನ್-217ರಲ್ಲಿ ಯೋಧ ಉಮೇಶ ಕೆಲಸ ಮಾಡುತ್ತಿದ್ದರು. ಯೋಧನ ಪಾರ್ಥೀವ ಶರೀರ ಮಾ. 19 ರಂದು ಸ್ವ-ಗ್ರಾಮಕ್ಕೆ ತಲುಪಿದ್ದು, ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ದಾವಣಗೆರೆ: ಮನೆಕಳ್ಳತನ ಪ್ರಕರಣ ದಾಖಲಾಗಿ 48 ಗಂಟೆಗಳಲ್ಲಿ ಆರೋಪಿ ಬಂಧನ; 5.50 ಲಕ್ಷ ಮೌಲ್ಯದ ಸ್ವತ್ತು ವಶ



