ಪ್ರಮುಖ ಸುದ್ದಿ
ಶಬರಿಮಲೆ ಭಕ್ತರಿಗೆ ಸಿಹಿ ಸುದ್ದಿ; ಹುಬ್ಬಳ್ಳಿಯಿಂದ ಮೂರು ತಿಂಗಳು ವಿಶೇಷ ರೈಲು; ಎಲ್ಲೆಲ್ಲಿ ನಿಲ್ಲಲಿದೆ ಈ ರೈಲು; ದಾವಣಗೆರೆಗೆ ಎಷ್ಟೊತ್ತಿಗೆ ಬರಲಿದೆ ..?

ದಾವಣಗೆರೆ: ಶಬರಿಮಲೆ ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ರಾಜ್ಯದ ಹುಬ್ಬಳ್ಳಿಯಿಂದ ಕೇರಳದ ಕೊಟ್ಟಾಯಂ ನಿಲ್ದಾಣಕ್ಕೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಈ ರೈಲು ಮೂರು ತಿಂಗಳು ರೈಲು ಸಂಚರಿಸಲಿದೆ.
ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ.
ರೈಲು ಸಂಖ್ಯೆ 07371 ಎಸ್ಎಸ್ಎಸ್ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್ಪ್ರೆಸ್ ರೈಲು ನವೆಂಬರ್ 19 ರಿಂದ 2025ರ ಜನವರಿ 14ರವರೆಗೆ ಸಂಚರಿಸಲಿದೆ. ರೈಲು ಸಂಖ್ಯೆ 07372 ಎಸ್ಎಸ್ಎಸ್ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್ಪ್ರೆಸ್ ರೈಲು ನವೆಂಬರ್ 20 ರಿಂದ 2025ರ ಜನವರಿ 15ರವರೆಗೆ ಸಂಚರಿಸಲಿದೆ.
ವಿಶೇಷತೆ ಏನು..?: 2 ಎಸಿ ಟೈಯರ್ , 2 ಎಸಿ ತ್ರಿ ಟೈಯರ್, 6 ಸ್ಲೀಪರ್ ಕ್ಲಾಸ್, 6 ಜನರಲ್ ಸೆಕೆಂಡ್ ಕ್ಲಸ್ ಮತ್ತು 2 ಎಸ್ಎಲ್ಆರ್ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ.
ವಾರಕ್ಕೊಮ್ಮೆ ವಿಶೇಷ ರೈಲು
ದಾವಣಗೆರೆಗೆ ಎಷ್ಟೊತ್ತಿಗೆ ಬರಲಿದೆ..?
ಎಲ್ಲೆಲ್ಲಿ ನಿಲ್ದಾಣ..?:ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸಿಕೆರೆ, ತುಮಕೂರು, ಚಿಕ್ಕಬಣಾವರ, ಎಸ್ಎಂಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೋದನೂರು, ಪಾಲಕ್ಕಾಡ್, ತ್ರಿಶೂರ್, ಅಲುವ, ಎರ್ನಾಕುಲಂ ಟೌನ್, ಎಟ್ಟುಮನೂರ್ ಮತ್ತು ಕೊಟ್ಟಾಯಂ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಆದ www.enquiry.indianrail.gov.in ಗೆ ಅಥವಾ NTES ಆಯಪ್ ತಿಳಿದುಕೊಳ್ಳಬಹುದು.
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...
ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...
ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...
ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...
ಶಿವಮೊಗ್ಗ: ದಾವಣಗೆರೆ ಜಿಲ್ಲಾ ರೈತರ ಜೀವನಾಡಿಯಾದ ಭದ್ರಾ ಜಲಾಶಯ (bhadra dam) ಬಲದಂಡೆ ನಾಲೆಯನ್ನು ಒಡೆದು ಕುಡಿಯುವ ನೀರಿನ ಯೋಜನೆಗಾಗಿ ನೀರು...