Connect with us

Dvgsuddi Kannada | online news portal | Kannada news online

ಶಬರಿಮಲೆ ಭಕ್ತರಿಗೆ ಸಿಹಿ ಸುದ್ದಿ; ಹುಬ್ಬಳ್ಳಿಯಿಂದ ಮೂರು ತಿಂಗಳು ವಿಶೇಷ ರೈಲು; ಎಲ್ಲೆಲ್ಲಿ ನಿಲ್ಲಲಿದೆ ಈ ರೈಲು; ದಾವಣಗೆರೆಗೆ ಎಷ್ಟೊತ್ತಿಗೆ ಬರಲಿದೆ ..?

davangere train

ಪ್ರಮುಖ ಸುದ್ದಿ

ಶಬರಿಮಲೆ ಭಕ್ತರಿಗೆ ಸಿಹಿ ಸುದ್ದಿ; ಹುಬ್ಬಳ್ಳಿಯಿಂದ ಮೂರು ತಿಂಗಳು ವಿಶೇಷ ರೈಲು; ಎಲ್ಲೆಲ್ಲಿ ನಿಲ್ಲಲಿದೆ ಈ ರೈಲು; ದಾವಣಗೆರೆಗೆ ಎಷ್ಟೊತ್ತಿಗೆ ಬರಲಿದೆ ..?

ದಾವಣಗೆರೆ: ಶಬರಿಮಲೆ ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ರಾಜ್ಯದ ಹುಬ್ಬಳ್ಳಿಯಿಂದ ಕೇರಳದ ಕೊಟ್ಟಾಯಂ ನಿಲ್ದಾಣಕ್ಕೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಈ ರೈಲು ಮೂರು ತಿಂಗಳು ರೈಲು ಸಂಚರಿಸಲಿದೆ.

ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ.

ರೈಲು ಸಂಖ್ಯೆ 07371 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 19 ರಿಂದ 2025ರ ಜನವರಿ 14ರವರೆಗೆ ಸಂಚರಿಸಲಿದೆ. ರೈಲು ಸಂಖ್ಯೆ 07372 ಎಸ್​ಎಸ್​ಎಸ್​ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್​ಪ್ರೆಸ್​ ರೈಲು ನವೆಂಬರ್​ 20 ರಿಂದ 2025ರ ಜನವರಿ 15ರವರೆಗೆ ಸಂಚರಿಸಲಿದೆ.

ವಿಶೇಷತೆ ಏನು..?: 2 ಎಸಿ ಟೈಯರ್ , 2 ಎಸಿ ತ್ರಿ ಟೈಯರ್​, 6 ಸ್ಲೀಪರ್​ ಕ್ಲಾಸ್​, 6 ಜನರಲ್​ ಸೆಕೆಂಡ್​ ಕ್ಲಸ್​ ಮತ್ತು 2 ಎಸ್​ಎಲ್​ಆರ್​ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ.

ವಾರಕ್ಕೊಮ್ಮೆ ವಿಶೇಷ ರೈಲು

  • ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಾರಕ್ಕೊಮ್ಮೆ ವಿಶೇಷ ರೈಲು ಸಂಚರಲಿಸಲಿದೆ. ಈ ರೈಲು ಹುಬ್ಬಳ್ಳಿಯಿಂದ ಪ್ರತಿ ಮಂಗಳವಾರ ಹೊರಟು ಮರುದಿನ ಬುಧವಾರ ಕೊಟ್ಟಾಯಂ ತಲುಪಲಿದೆ
  • ರೈಲು ಸಂಖ್ಯೆ 07371 ಹುಬ್ಬಳ್ಳಿ-ಕೊಟ್ಟಾಯಂ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯಾಹ್ನ 3:15ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬುಧವಾರ ಮಧ್ಯರಾತ್ರಿ 12ಕ್ಕೆ ಕೊಟ್ಟಾಯಂ ತಲುಪಲಿದೆ
  • ರೈಲು ಸಂಖ್ಯೆ 07372 ಕೊಟ್ಟಾಯಂ-ಹುಬ್ಬಳ್ಳಿ ವಾರಕ್ಕೊಮ್ಮೆ ವಿಶೇಷ ರೈಲು ಪ್ರತಿ ಮಂಗಳವಾರ ಮಧ್ಯರಾತ್ರಿ 12:50ಕ್ಕೆ ಕೊಟ್ಟಾಯಂನಿಂದ ಹೊರಟು ಮರುದಿನ ಬುಧವಾರ ಮಧ್ಯಾಹ್ನ 03:00ಕ್ಕೆ ಹುಬ್ಬಳ್ಳಿ ತಲುಪಲಿದೆ

ದಾವಣಗೆರೆಗೆ ಎಷ್ಟೊತ್ತಿಗೆ ಬರಲಿದೆ..?

  • ದಾವಣಗೆರೆಗೆ ಪ್ರತಿ ಮಂಗಳವಾರ ಸಂಜೆ 5.20 (17.20) ಹುಬ್ಬಳ್ಳಿಯಿಂದ ಬರಲಿದ್ದು, 5.22 ಕ್ಕೆ ಹೊರಡಲಿದೆ
  • ಕೊಟ್ಟಾಯಂನಿಂದ ಹೊರಟ ರೈಲು ಪ್ರತಿ‌ ಬುಧವಾರ ಬೆಳಗ್ಗೆ ಬೆಳಗ್ಗೆ 9.03 ಕ್ಕೆ ದಾವಣಗೆರೆ ತಲುಪಿ, 9.05ಕ್ಕೆ ಹೊರಡಲಿದೆ.

ಎಲ್ಲೆಲ್ಲಿ ನಿಲ್ದಾಣ..?:ಎಸ್​ಎಸ್​ಎಸ್​ ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸಿಕೆರೆ, ತುಮಕೂರು, ಚಿಕ್ಕಬಣಾವರ, ಎಸ್​ಎಂಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್​, ತಿರುಪ್ಪೂರು, ಪೋದನೂರು, ಪಾಲಕ್ಕಾಡ್​, ತ್ರಿಶೂರ್​, ಅಲುವ, ಎರ್ನಾಕುಲಂ ಟೌನ್​, ಎಟ್ಟುಮನೂರ್​ ಮತ್ತು ಕೊಟ್ಟಾಯಂ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ ಆದ www.enquiry.indianrail.gov.in ಗೆ ಅಥವಾ NTES ಆಯಪ್​ ತಿಳಿದುಕೊಳ್ಳಬಹುದು.

davangere tarin 1

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

davangere lokayukta visit 2
davangere mahanagara palike dvgsuddi
davangere lokayukta 2
Morarji Desai school 1
davangere lokayukta visit 1
Advertisement
Advertisement Enter ad code here

Title

To Top