ದಾವಣಗೆರೆ: ಬೈಕ್ ಸವಾರರು ಕಡ್ಡಾಯವಾಗಿ ಐಎಸ್ ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸಬೇಕು. ಬಂಗಾರದ ಅಂಗಡಿ ಮಾಲೀಕರು ಸಿಸಿಟಿವಿ, ಎಮರ್ಜೆನ್ಸಿ ಅಲಾರಂ ಅಳವಡಿಕೆ ಕಡ್ಡಾಯ ಬಗ್ಗೆ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆಯಿಂದ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು.
ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ದಾವಣಗೆರೆ ನಗರದಲ್ಲಿ ಪಥಸಂಚಲ (Foot petroling) ಅನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಹೊಂಡದ ವೃತ್ತದಿಂದ ಆರಂಭವಾಗಿಗ್ಯಾಸ್ ಕಟ್ಟೆ ಸರ್ಕಲ್, ಚೌಕಿಪೇಟೆ ರಸ್ತೆ, ಹಾಸಬಾವಿ ಸರ್ಕಲ್, ಕೆ ಆರ್ ಮಾರ್ಕೆಟ್, ಮಂಡಿಪೇಟೆ, ಗಡಿಯಾರ ಕಂಬದ ಸರ್ಕಲ್ ಮೂಲಕ ಬಸವನಗರ ಠಾಣೆಗೆ ಮುಕ್ತಾಯವಾಯಿತು.
ಪಥಸಂಚಲ ಸಮಯದಲ್ಲಿ ಬಂಗಾರದ ಅಂಗಡಿ ಮಾಲೀಕರಿಗೆ ಕಡ್ಡಾಯವಾಗಿ ಸಿಸಿಟಿವಿ ಹಾಗೂ ಎಮರ್ಜೆನ್ಸಿ ಅಲಾರಂ ಗಳನ್ನು ಅಳವಡಿಸಿಕೊಳ್ಳಲು ತಿಳಿಸಿದರು. ದ್ವಿ ಚಕ್ರ ವಾಹನಗಳಲ್ಲಿ ಐ ಎಸ್ ಐ ಮಾರ್ಕ್ ಇಲ್ಲದ ಹೆಲ್ಮೆಟ್ ಗಳನ್ನು ಧರಿಸಬಾರದು ಕಡ್ಡಾಯವಾಗಿ ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸಬೇಕು ಎಂದು ತಿಳಿಸಿದರು. ಇದೇ ವೇಳೆ ಸಾರ್ವಜನಿಕರೊಂದಿಗೆ, ವ್ಯಾಪಾರಸ್ಥರೊಂದಿಗೆ ಚರ್ಚಿಸಿ ಟ್ರಾಫಿಕ್ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.
ಪಥಸಂಚಲ ಸಮಯದಲ್ಲಿ ಹೆಚ್ಚುವರಿ ಎಸ್ಪಿ ವಿಜಯಕುಮಾರ್ ಎಂ ಸಂತೋಷ್, ಮಂಜುನಾಥ ಜಿ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ, ಪೊಲೀಸ್ ನಿರೀಕ್ಷಕ ಗುರುಬಸವರಾಜ್, ಬಾಲಚಂದ್ರ ನಾಯ್ಕ್, ಸುನೀಲ್ ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು.



