ದಾವಣಗೆರೆ: ಜಿಲ್ಲಾ ಪೊಲೀಸ್ ವತಿಯಿಂದ ಎಸ್ಪಿ ಉಮಾ ಪ್ರಶಾಂತ್ ಅಧ್ಯಕ್ಷತೆಯಲ್ಲಿ ದಾವಣಗೆರೆ ನಗರದ ಆಟೋ ಚಾಲಕರ ಹಾಗೂ ಮಾಲೀಕರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿ, ಎಲ್ಲಾ ಆಟೋ ಚಾಲಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ಆಟೋ ಚಾಲಕರ ಹಾಗೂ ಮಾಲೀಕರ ಸಮಸ್ಯೆಗಳನ್ನು ನಮ್ಮ ಪೊಲೀಸ್ ಪರಿಮಿತಿಯಲ್ಲಿ ಆಗುವಂತಹ ಎಲ್ಲಾ ಪರಿಹಾರಗಳನ್ನು ಒದಗಿಸಲಾಗುವುದು. ಹಲವು ಆಟೋ ಡ್ರೈವರ್ ಗಳು ತಮ್ಮ ಪ್ರಾಮಾಣಿಕತೆಯನ್ನು ಮರೆದಿದ್ದಾರೆ. ಇತ್ತೀಚಿಗೆ ಹಲವಾರು ಆಟೋ ಚಾಲಕರು ಪ್ರಯಾಣಿಕರು ಆಟೋದಲ್ಲಿ ಪ್ರಯಾಣಿಸುವಾಗ ಬಿಟ್ಟು ಹೋದಂತಹ ವಸ್ತುಗಳನ್ನು ಮರಳಿಸಿದ್ದಾರೆ. ಅವರುಗಳಿಗೆ ಅಭಿನಂದಿಸುತ್ತೇನೆ. ಆಟೋ ಚಾಲಕರನ್ನು ನಗರದ ಸಾಂಸ್ಕೃತಿಕ ಪರಿವಾಚಕರು ಎಂದು ಹೇಳಲಾಗುತ್ತದೆ. ಯಾಕೆಂದರೆ ನಗರದ ಬಗ್ಗೆ ಜಿಲ್ಲೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರಯಾಣಿಕರಿಗೆ ನೀಡುವವರು ಎಂದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಸಂತೋಷ್, ಮಂಜುನಾಥ ಜಿ, ಡಿವೈಎಸ್ಪಿ ಬಸವರಾಜ್ ಬಿ ಎಸ್, ಪ್ರಕಾಶ್ ಪಿ ಬಿ, ಸಂಚಾರ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ ನಲವಾಗಲು, ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಮತ್ತು ಆಟೋ ಚಾಲಕರ ಸಂಘದ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಕೊಟ್ರೇಶಪ್ಪ, ಮಂಜುನಾಥ, ಮಾರುತಿ, ಆಟೋ ಚಾಲಕರು – ಮಾಲೀಕರು ಉಪಸ್ಥಿತರಿದ್ದರು.



