ದಾವಣಗೆರೆ: ಚೆಕ್ ಪೋಸ್ಟ್ ಗಳಲ್ಲಿ ಅಡಕೆ ತುಂಬಿದ ಟ್ರ್ಯಾಕ್ಟರ್ಗಳಿಂದ ಹಣ ವಸೂಲಿ ಮತ್ತು ರೈತರ ಮೇಲೆ ದೌರ್ಜನ್ಯ ಎಸಗುತ್ತಿದ್ದ ಆರೋಪದ ಹಿನ್ನೆಲೆ ಆಜಾದ್ ನಗರ ಠಾಣೆಯ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಿ ಎಸ್ಪಿ ಉಮಾ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ.
ಅಂಕಳಪ್ಪ ಹಾಗೂ ಮುಬಾರಕ್ ಅಮಾನತುಗೊಂಡ ಪೊಲೀಸ್ ಕಾನ್ ಸ್ಟೇಬಲ್ ಗಳು. ನಗರದ ಬೇತೂರು ರಸ್ತೆಯ ಚೆಕ್ ಪೋಸ್ಟ್ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ದಾವಣಗೆರೆ ಮಾರ್ಗವಾಗಿ ಬರುವ ಅಡಕೆ ತುಂಬಿದ ಟ್ರ್ಯಾಕ್ಟರ್ ನ ರೈತರಿಂದ ಹಣ ವಸೂಲಿ ಮಾಡುತ್ತಿದ್ದರು. ಕರ್ತವ್ಯ ಲೋಪ, ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಆರೋಪ ಈ ಇಬ್ಬರು ಪೇದೆ ಮೇಲೆ ಇತ್ತು.
ಆಜಾದ್ ನಗರ ಠಾಣೆಯ ಅಂಕಳಪ್ಪ, ಮುಬಾರಕ್ ವಿರುದ್ಧ ಇಲಾಖೆ ಶಿಸ್ತುಕ್ರಮಕ್ಕೆ ಆಜಾದ್ ನಗರ ವೃತ್ತ ನಿರೀಕ್ಷಕರು ನೀಡಿದ ವರದಿ ಮೇಲೆ ನಗರ ಡಿವೈಎಸ್ಪಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು. ಈ ಇಬ್ಬರೂ ಸಿಬ್ಬಂದಿ ವಿರುದ್ಧ ಮುಂದಿನ ಇಲಾಖೆ ಶಿಸ್ತು ಕ್ರಮ ಬಾಕಿ ಇರಿಸಿಕೊಂಡು, ತಕ್ಷದಿಂದಲೇ ಜಾರಿಗೊಳ್ಳುವಂತೆ ಸೇವೆಯಿಂದ ಅಮಾನತುಗೊಳಿಸಿ, ಎಸ್ಪಿ ಆದೇಶ ಹೊರಡಿಸಿದ್ದಾರೆ.



