ದಾವಣಗೆರೆ:  ಎಸ್.ಪಿ ಬಾಲಸುಬ್ರಹ್ಮಣ್ಯಂಗೆ ಗಾನ ನಮನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ:  ಗಾನಗಾರುಡಿಗ, ಸ್ವರಸಾರ್ವಭೌಮ, ಖ್ಯಾತ ಹಿನ್ನೆಲೆ ಗಾಯಕ ದೇಶಕಂಡ ಮಹಾನ್‌ ಸಂಗೀತ ಸಾಧಕ ಪದ್ಮಭೂಷಣ ಡಾ. ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ರೋಟರ್ಯಾಕ್ಟ್‌ ಸಂಸ್ಥೆ  ಹಾಗೂ ಗೋ ಗ್ರೀನ್‌ ಸಂಸ್ಥೆ ವತಿಯಿಂದ ಗಾನ ನಮನ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಫೇಸ್‌ಬುಕ್‌ ಲೈವ್‌ ಮೂಲಕ ನಮನ ಸಲ್ಲಿಸಲಾಯಿತು. ದಾವಣಗೆರೆಯ ಉದಯೋನ್ಮುಖ ಗಾಯಕರಾದ ಶ್ರೀಧರ ಹಾಗೂ ಮಾನಸ ಅವರು ಎಸ್‌ಪಿಬಿ ಅವರ ಆಯ್ದ ಜನಪ್ರಿಯ ಹಾಡುಗಳನ್ನು ಸುಶ್ಯಾವ್ಯವಾಗಿ ಹಾಡಿ ಗೀತನಮನ ಸಲ್ಲಿಸಿದರು. ಅಮೆರಿಕದಲ್ಲಿ ನೆಲೆಸಿರುವ ನಮ್ಮ ದಾವಣಗೆರೆಯ  ಹಿರಿಯ ಪತ್ರಕರ್ತ, ಲೇಖಕರು ಅನಿಲ್‌ ಭಾರದ್ವಾಜ್‌ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚೆಂದದ ನಾಲ್ಕು ಸಾಲುಗಳನ್ನು ರಚಿಸಿದ ಗೀತರಚನೆಕಾರರಿಗೂ ಹಾಗೂ ಅದಕ್ಕೆ ತಕ್ಕನಾಗಿ ಸಂಗೀತ ಸಂಯೋಜಿಸಿದ್ದ ಸಂಗೀತ ನಿರ್ದೇಶಕರಿಗೂ ಅವರು ಮಾಡಿದ ಕಾರ್ಯ ಸಾರ್ಥಕ ಎಂಬಂತೆ ಎಸ್‌ಪಿಬಿ ಆ ಹಾಡಿಗೆ ಜೀವ ತುಂಬುವ ಕೈಂಕರ್ಯ ನೆರವೇರಿಸುತ್ತಿದ್ದರು ಎಂದು ಸ್ಮರಿಸಿದರು.

ಎಂತಹ ಕ್ಲಿಷ್ಟಕರ ರಾಗಗಳಿದ್ದರೂ ನೀರು ಕುಡಿದಷ್ಟೇ ಸರಾಗವಾಗಿ ಹಾಡಿ ಅಚ್ಚರಿ ಮೂಡಿಸುತ್ತಿದ್ದ ಮೇರುಗಾಯಕ ಇಂದು ನಮ್ಮ ನಡುವೆ ಇಲ್ಲದಿದ್ದರೂ ಅವರು ಹಾಡಿದ ಸಹಸ್ರ ಸಹಸ್ರ ಹಾಡುಗಳ ಮೂಲಕ ಅವರು ನಮ್ಮೆಲ್ಲರ ಮನೆಗಳಲ್ಲಿ ಮನಗಳಲ್ಲಿ ನೆಲೆಸಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ನಾಗರಾಜ್‌ ಡಿ.ಎಂ, ಶ್ರೀಕಾಂತ್ ಬಗಾರೆ, ರೋಟರ್ಯಾಕ್ಟ್‌ ಸಂಸ್ಥೆಯ ಕಾರ್ಯದರ್ಶಿ ಚೇತನ್‌ ಕುಮಾರ್‌  ಉಪಸ್ಥಿತರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *