Connect with us

Dvgsuddi Kannada | online news portal | Kannada news online

ದಾವಣಗೆರೆ: ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಜಿಲ್ಲೆಯ ನಾಗರಾಜಪ್ಪ 10 ಸಾವಿರ ಮೀ. ಓಟದಲ್ಲಿ ಪ್ರಥಮ

davangerer bord

ದಾವಣಗೆರೆ

ದಾವಣಗೆರೆ: ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಜಿಲ್ಲೆಯ ನಾಗರಾಜಪ್ಪ 10 ಸಾವಿರ ಮೀ. ಓಟದಲ್ಲಿ ಪ್ರಥಮ

ದಾವಣಗೆರೆ: ಮಹಾರಾಷ್ಟ್ರದ ನಾಸಿಕ್‍ನಲ್ಲಿ ಕಳೆದ ನ.11 ರಿಂದ 14 ರವರೆಗೆ ನಡೆದ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದಿಂದ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಿ ಪದಕ ಪಡೆದುಕೊಂಡಿದ್ದಾರೆ. ನಾಗರಾಜಪ್ಪ ಅವರು 10 ಸಾವಿರ ಮೀ. ಓಟದಲ್ಲಿ ಪ್ರಥಮ, 5 ಸಾವಿರ ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಲಕ್ಷ್ಮಣ್ ರಾವ್ ಸಾಲಂಕಿ ಅವರು 10 ಸಾವಿರ ಮೀ. ಓಟದಲ್ಲಿ ತೃತೀಯ ಸ್ಥಾನ, 5 ಸಾವಿರ ಮೀ. ಓಟದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಸಂತೋಷ್.ಡಿ ಅವರು 5 ಸಾವಿರ ಮೀ. ಓಟದಲ್ಲಿ ದ್ವಿತೀಯ ಸ್ಥಾನ, 3 ಸಾವಿರ ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯಕ್ಕೆ ಹಾಗೂ ಜಿಲ್ಲೆಗೆ ಕೀರ್ತಿ ತಂದ ಇವರು ಕಾನೂನು ಕಾಲೇಜು ವಿದ್ಯಾರ್ಥಿ ಹಾಗೂ ಕ್ರೀಡಾಪಟು ಆದ ಸಂತೋಷ್.ಡಿ ಅವರ ಬಳಿ ತರಬೇತಿ ಪಡೆದುಕೊಂಡಿದ್ದರು.
ವಿಜೇತರಾದ ಕ್ರೀಡಾಪಟುಗಳಿಗೆ ಹಾಗೂ ತರಬೇತುದಾರರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥಸ್ವಾಮಿ, ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top