ದಾವಣಗೆರೆ: ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಬೆಂಗಳೂರು ವಿದ್ಯಾನಗರದ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರವನ್ನು ರಾಜ್ಯ ಉತ್ಕøಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಿದ್ದು, ಈ ಕೇಂದ್ರಕ್ಕೆ ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಅಧಾರದ ಮೇಲೆ Physiotherapist Grade II ಮತ್ತು Sports Masseur (1 Men & 1 Women) ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ದಾವಣಗೆರೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಾರ್ಯಾಲಯ ಜಿಲ್ಲಾ ಕ್ರೀಡಾಂಗಣ ಇಲ್ಲಿ ಕಚೇರಿ ವೇಳೆಯಲ್ಲಿ ಪಡೆದು, ಭರ್ತಿ ಮಾಡಿದ ನಮೂನೆಯನ್ನು ಜೂ.28 ರ ಒಳಗಾಗಿ ಸಲ್ಲಿಸಬಹುದು ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 08192-237480 ಯನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



