ದಾವಣಗೆರೆ: ರಾಷ್ಟ್ರ ಮಟ್ಟದ ಖೋ ಖೋ ಸ್ಪರ್ಧೆಗೆ ಜಿಲ್ಲೆಯ ಪುನೀತ್, ಪ್ರಕಾಶ್, ಸಮರ್ಥ ಆಯ್ಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಹಿಮಾಚಲ ಪ್ರದೇಶದ ಹುನಾದಲ್ಲಿ ನ.27 ರಿಂದ ಡಿ.01 ರವರೆಗೆ ನಡೆಯುವ 31ನೇ ರಾಷ್ಟ್ರಮಟ್ಟದ ಸಬ್ ಜ್ಯೂನಿಯರ್ ಖೋ-ಖೋ ಚಾಂಪಿಯನ್‍ಷಿಪ್‍ನಲ್ಲಿ ಭಾಗವಹಿಸುವ ಕರ್ನಾಟಕ ರಾಜ್ಯ ತಂಡಕ್ಕೆ ದಾವಣಗೆರೆ ಕ್ರೀಡಾ ವಸತಿ ಶಾಲೆಯ ಕ್ರೀಡಾಪಟುಗಳಾದ ಪುನೀತ್ ಭೋವಿ, ಪ್ರಕಾಶ್ ಮಾದರ್ ಮತ್ತು ಸಮರ್ಥ ಆಯ್ಕೆಯಾಗಿದ್ಧಾರೆ.  ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನ.12 ರಿಂದ 23 ರವರೆಗೆ ನಡೆದ ರಾಜ್ಯ ತಂಡದ ಪೂರ್ವಭಾವಿ ತರಬೇತಿ ಶಿಬಿರದಲ್ಲಿ ಭಾಗವಹಿಸಿ ತರಬೇತಿ ಪಡೆದು, ರಾಜ್ಯ ತಂಡಕ್ಕೆ ಆಯ್ಕೆಯಾಗಿರುತ್ತಾರೆ.

ಈ ಕ್ರೀಡಾಪಟುಗಳಿಗೆ ಇಲಾಖೆಯ ಖೋ-ಖೋ ತರಬೇತುದಾರ ಜೆ.ರಾಮಲಿಂಗಪ್ಪ ತರಬೇತಿ ನೀಡುತ್ತಿದ್ದಾರೆ. ಇವರು ಹಿಮಾಚಲ ಪ್ರದೇಶದ ಹುನಾದಲ್ಲಿ ನಡೆಯುವ 31ನೇ ರಾಷ್ಟ್ರಮಟ್ಟದ ಸಬ್ ಜ್ಯೂನಿಯರ್ ಖೋ-ಖೋ ಚಾಂಪಿಯನ್‍ಷಿಪ್‍ನಲ್ಲಿ ಭಾಗವಹಿಸುವ ಕರ್ನಾಟಕ ರಾಜ್ಯ ತಂಡ ವಿಜೇತರಾಗಲೆಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಟಿ. ಮಂಜುನಾಥಸ್ವಾಮಿ ಎಂ. ಟಿ. ಮಂಜುನಾಥಸ್ವಾಮಿ, ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *