ದಾವಣಗೆರೆ: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪ್ರೌಢಶಾಲೆ ವಿಭಾಗದ ಬಾಲಕರ ಬೆಂಗಳೂರು ವಿಭಾಗ ಮತ್ತು ರಾಜ್ಯ ಮಟ್ಟದ ಖೋ ಖೋ ಕ್ರೀಡಾಕೂಟದಲ್ಲಿ ದಾವಣಗೆರೆ ತಾಲೂಕಿನ ತುರ್ಚಘಟ್ಟ ಆಂಜನೇಯ ಸರ್ಕಾರಿ ಪ್ರೌಢಶಾಲೆಯ ಬಾಲಕರು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಗರದ ಪಿ.ಜೆ.ಬಡಾವಣೆಯ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ದೈಹಿಕ ಶಿಕ್ಷಕ ರವಿ ಅವರು ಈ ಬಾಲಕರಿಗೆ ತರಬೇತಿ ನೀಡಿದ್ದಾರೆ. ಬಾಲಕರ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ದೈಹಿಕ ಶಿಕ್ಷಕ ಎಸ್.ಶ್ರೀನಿವಾಸ್ ಅಭಿನಂದನೆ ಸಲ್ಲಿಸಿದ್ದಾರೆ.
ದಾವಣಗೆರೆ: ರಾಜ್ಯ ಮಟ್ಟದ ಖೋ-ಖೋ ಕ್ರೀಡಾಕೂಟದಲ್ಲಿ ತುರ್ಚಘಟ್ಟ ಆಂಜನೇಯ ಸರ್ಕಾರಿ ಪ್ರೌಢಶಾಲೆಯ ಬಾಲಕರಿಗೆ ಚಿನ್ನದ ಪದಕ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



