ದಕ್ಷಿಣ ಭಾರತ ಮಟ್ಟದ ಖೋ ಖೋ ಪಂದ್ಯಾವಳಿ; ದಾವಣಗೆರೆಯ ಅರ್ಜುನ್, ತಾಸೀನ್ ಭಾಗವಹಿಸಿದ್ದ ತಂಡ ರಾಜ್ಯ ತಂಡಕ್ಕೆ ಬೆಳ್ಳಿ ಪದಕ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕಳೆದ ನ.12 ರಿಂದ 14 ರವರೆಗೆ ತೆಲಂಗಾಣದ ಹನುಮಕೊಂಡದಲ್ಲಿ ನಡೆದ 30ನೇ ದಕ್ಷಿಣ ಭಾರತ ಹಿರಿಯರ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿದ ರಾಜ್ಯ ಪುರುಷರ ತಂಡವು ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ ವಿರುದ್ದ ವಿಜಯ ಸಾಧಿಸಿ, ಅಂತಿಮ ಪಂದ್ಯದಲ್ಲಿ ಕೇರಳ ರಾಜ್ಯ ತಂಡದ ವಿರುದ್ಧ1 ಅಂಕದಿಂದ ಪರಾಜಿತಗೊಂಡು ಬೆಳ್ಳಿ ಪದಕ ಸಾಧನೆ ಮಾಡಿರುತ್ತದೆ.

ಕರ್ನಾಟಕ ರಾಜ್ಯದ ತಂಡದಲ್ಲಿ ದಾವಣಗೆರೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಾದ ಅರ್ಜುನ್ ಮತ್ತು ಮಹಮ್ಮದ್ ತಾಸೀನ್  ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿರುತ್ತಾರೆ. ಈ ಕ್ರೀಡಾಪಟುಗಳಿಗೆ ಇಲಾಖೆಯ ಖೋ-ಖೋ ತರಬೇತುದಾರ ಜೆ.ರಾಮಲಿಂಗಪ್ಪ ತರಬೇತಿ ನೀಡಿರುತ್ತಾರೆ. ಈ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಪಡೆದು, ಸಾಧನೆ ಮಾಡಿದ ರಾಜ್ಯ ತಂಡಕ್ಕೆ ಹಾಗೂ ದಾವಣಗೆರೆ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುಗಳಿಗೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಟಿ. ಮಂಜುನಾಥಸ್ವಾಮಿ ಅಭಿನಂದಿಸಿದ್ದಾರೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *