ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ವಿಶೇಷ ಚೇತನರೊಬ್ಬರು ತನ್ನ 52ನೇ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದಾರೆ. ಸಿದ್ಧಲಿಂಗಪ್ಪ ಪರೀಕ್ಷೆ ಬರೆದವರು. ವಿಶೇಷ ಮೀಸಲಾತಿಯಲ್ಲಿ ಪಡಿತರ ವಿತರಣಾ ಕೇಂದ್ರ ತೆರೆಯಲು ಎಸ್ಸೆಸ್ಸೆಲ್ಸಿ ತೇರ್ಗಡೆ ಕಡ್ಡಾಯವಾಗಿದೆ. ಪಡಿತರ ವಿತರಣಾ ಕೇಂದ್ರ ತೆರೆಯಲು 35 ವರ್ಷ ಬಳಿಕ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕುಳಿತಿದ್ದೇನೆ. ಕೆಲವು ಶಿಕ್ಷಕರಿಂದ ಮಾರ್ಗದರ್ಶನ ಪಡೆದಿದ್ದೇನೆ. ವಿದ್ಯಾರ್ಥಿಗಳಿಂದ ನೋಟ್ಸ್ ಸಂಗ್ರಹಿಸಿ ಓದಿದ್ದೇನೆ ಎಂದಿದ್ದಾರೆ.



