ಸೂಳೆಕೆರೆ ಪ್ರವಾಸಿ ತಾಣದಲ್ಲಿ ಏಕ ಬಳಕೆ ಪ್ಲಾಸ್ಟಿಕ್ , ಹೊರಗಿನ ಆಹಾರ ಪದಾರ್ಥ ನಿಷೇಧ: ಡಿಸಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಜಿಲ್ಲೆ ರಾಜ್ಯದ ಮಧ್ಯಭಾಗದಲ್ಲಿದ್ದು, ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಹಾಗೂ ಪ್ರಾಕೃತಿಕ ಸುಂದರ ಪ್ರವಾಸಿ ತಾಣವನ್ನು ಒಳಗೊಂಡ ಏಷ್ಯಾದ 2ನೇ ಅತೀ ದೊಡ್ಡ ಮಾನವ ನಿರ್ಮಿತ ಶಾಂತಿಸಾಗರ (ಸೂಳೆಕೆರೆ) ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಪ್ರಮುಖ ಪ್ರವಾಸಿ ತಾಣವಾಗಿದೆ.

ಪ್ಲಾಸ್ಟಿಕ್ ಬಳಕೆಯಿಂದ ವಾತಾವರಣ ಕಲುಷಿತ

ಪ್ರವಾಸಿಗರ ಅನುಕೂಲಕ್ಕಾಗಿ, ಪ್ರವಾಸೋದ್ಯಮ ಇಲಾಖೆಯಿಂದ ಉದ್ಯಾನವನ, ಪಾರ್ಕಿಂಗ್, ಬೋಟಿಂಗ್ ಸೌಲಭ್ಯ ಹಾಗೂ ವಾಣಿಜ್ಯ ಕೊಠಡಿ, ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಒಂದೆಡೆ ಪ್ರವಾಸಿಗರನ್ನು ಸೆಳೆಯುತ್ತಿರುವುದರಿಂದ ಪ್ರತಿ ದಿನ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಬೇಟಿ ನೀಡುತ್ತಾರೆ. ಇನ್ನೊಂದೆಡೆ ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ನೈಸರ್ಗಿಕ ವಾತಾವರಣ ಕಲುಷಿತಗೊಳ್ಳುತ್ತಿದೆ. ಆದ್ದರಿಂದ ಪ್ರವಾಸಿ ತಾಣದ ಬೋಟಿಂಗ್ ಸ್ಥಳದಲ್ಲಿ ಪ್ರವಾಸಿಗರು ನೀರಿನ ಬಾಟಲಿ, ಪಾನೀಯ ಬಾಟಲಿ, ಪ್ಲಾಸ್ಟಿಕ್ ಕವರ್, ಚಾಕಲೇಟ್ ಕವರ್, ಚಿಪ್ಸ್ ಪ್ಯಾಕೇಟ್ ಇತ್ಯಾದಿ ಏಕ ಬಳಕೆಯ ಪ್ಲಾಸ್ಟಿಕ್ ಹಾಗೂ ಹೊರಗಿನ ಯಾವುದೇ ತಿಂಡಿ ಮತ್ತು ಆಹಾರ ಪದಾರ್ಥಗಳನ್ನು ಬೋಟಿಂಗ್ ಸ್ಥಳದಲ್ಲಿ ಸಂಪೂರ್ಣ ನಿಷೇಧಿಸಲಾಗಿದೆ.

ನಿಯಮ ಉಲ್ಲಂಘಿಸಿದ್ರೆ ದಂಡ

ಒಂದು ವೇಳೆ ಪ್ರವಾಸಿ ತಾಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಿದಲ್ಲಿ ರೂ.100 ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *