Connect with us

Dvgsuddi Kannada | online news portal | Kannada news online

ಕರ್ತವ್ಯಲೋಪ; ಹರಿಹರ ನಗರಸಭೆ ಬಿಲ್ ಕಲೆಕ್ಟರ್ ಅಮಾನತು

suspended

ದಾವಣಗೆರೆ

ಕರ್ತವ್ಯಲೋಪ; ಹರಿಹರ ನಗರಸಭೆ ಬಿಲ್ ಕಲೆಕ್ಟರ್ ಅಮಾನತು

ಹರಿಹರ: ಕರ್ತವ್ಯಲೋಪ ಆರೋಪದ ಹಿನ್ನೆಲೆ ಹರಿಹರ ನಗರಸಭೆ ಬಿಲ್ ಕಲೆಕ್ಟರ್ ಅಣ್ಣಪ್ಪ ಟಿ. ಅಮಾನತು(Suspension) ಮಾಡಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.17ರಿಂದ ಆರಂಭವಾಗಿದ್ದ ಬಿ-ಖಾತಾ ಅಭಿಯಾನದಡಿ, ಅರ್ಜಿ ವಿಲೇವಾರಿ ಮಾಡದೇ ವಿಳಂಬ ಮಾಡುತ್ತಿದ್ದ ಆರೋಪ ಬಂದಿತ್ತು. ಈವರೆಗೆ ಅಣ್ಣಪ್ಪ 764 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿದ್ದಾರೆ‌ ಇದರಲ್ಲಿ ಕೇವಲ120 ಅರ್ಜಿಗಳನ್ನು ಮಾತ್ರ ವಿಲೇವಾರಿ ಮಾಡಿದ್ದು, 644 ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿರುವುದು ತನಿಖೆಯಿಂದ ಗೊತ್ತಾಗಿದೆ.

ಈ ಹಿಂದೆ ಅಣ್ಣಪ್ಪ ಎರಡು ಬಾರಿ ಕಾರಣ ಕೇಳಿ ನೋಟಿಸ್ ನೀಡಿ ಎಚ್ಚರಿಸಿ, ಸಾರ್ವಜನಿಕರನ್ನು ಅಲೆದಾಡಿಸಬೇಡಿ ಎಂದು ತಾಕೀತು ಮಾಡಲಾಗಿತ್ತು. ಹೀಗಿದ್ದರೂ ಅನುಮತಿ ಇಲ್ಲದೆ ರಜೆಯ ಮೇಲೆ ತೆರಳಿದ್ದರು.

ನಗರಸಭೆಯ ಕಂದಾಯ ಶಾಖೆಯ ಅಧಿಕಾರಿಗಳ ವರದಿ ಹಾಗೂ ಪರಿಶೀಲನೆ ವೇಳೆ ಕಂಡುಬಂದ ಅಂಶಗಳನ್ನು ಪರಿಗಣಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top