ದಾವಣಗೆರೆ : ದೊಡ್ಡಬಾತಿಯ ತಪೋವನ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮೊದಲನೇ ಘಟಿಕೋತ್ಸವ ಸಮಾರಂಭವನ್ನು ಫೆ.4 ರಂದು ಮಧ್ಯಾಹ್ನ 2 ಗಂಟೆಗೆ ದೊಡ್ಡಬಾತಿ ತಪೋವನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಡಾ. ಜಿ.ಎಂ. ಸಿದ್ದೇಶ್ವರ ಉಪಸ್ಥಿತರಿರುವರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರೋ. ಎಸ್.ವಿ ಹಲಸೆ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವದ ಭಾಷಣ ನೆರವೇರಿಸುವರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ. ಶ್ರೀನಿವಾಸ್ ಬನ್ನಿಗೋಳ ಮತ್ತು ತಪೋವನ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ. ಉಪಸ್ಥಿತರಿರುವರು. ಪ್ರಾಂಶುಪಾಲರು ಡಾ. ಶ್ರೀಕಾಂತ್. ಬಿ.ಜಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.



