Connect with us

Dvgsuddi Kannada | online news portal | Kannada news online

ದಾವಣಗೆರೆ: ತರಳಬಾಳು ಕೆವಿಕೆಯಿಂದ ಸೋಯಾಬಿನ್ ಸಮಗ್ರ ನಿರ್ವಹಣೆ ಕುರಿತು ಮಾಹಿತಿ

soia

ದಾವಣಗೆರೆ

ದಾವಣಗೆರೆ: ತರಳಬಾಳು ಕೆವಿಕೆಯಿಂದ ಸೋಯಾಬಿನ್ ಸಮಗ್ರ ನಿರ್ವಹಣೆ ಕುರಿತು ಮಾಹಿತಿ

ದಾವಣಗೆರೆ: ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ಚನ್ನಗಿರಿ ತಾಲೂಕಿನ ನೀತಗೆರೆ ಗ್ರಾಮದಲ್ಲಿ ಎಣ್ಣೆಕಾಳು ಬೆಳೆಯಾದ ಸೋಯಾಬೀನ್ ಬೆಳೆ ಸಮಗ್ರ ನಿರ್ವಹಣೆ ಮತ್ತು ಮುಂಚೂಣಿ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು.

ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞರು ಮಲ್ಲಿಕಾರ್ಜುನ ಬಿ ಓ ಕ್ಷೇತ್ರಕ್ಕೆ ಭೇಟಿ ನೀಡಿ, ಸೋಯಾಬೀನ್ ಈ ಪ್ರದೇಶಕ್ಕೆ ಹೊಸಬೆಳೆಯಾಗಿದ್ದು, ಉತ್ತಮವಾಗಿ ಬಂದಿರುತ್ತದೆ. ಸೋಯಾಬಿನ್ ನವೀನ ತಳಿಯಾದ DSB 34 ಬೆಳೆ ಹೂವಾಡುವ ಹಾಗೂ ಕಾಯಿ ಕಟ್ಟುವ ಹಂತದಲ್ಲಿದ್ದು ಈ ಸಂದರ್ಭದಲ್ಲಿ ನೀರಿನಲ್ಲಿ ಕರಗುವ ಗೊಬ್ಬರಗಳಾದ ಪೊಟಾಸಿಯಂ ನೈಟ್ರೇಟ್ (13:00:45) 5 ಗ್ರಾಂ ಪ್ರತಿ ಲೀಟರ್ ನೀರಿನಲ್ಲಿ ಹಾಗೂ ಕಾಯಿ ಕೊರಕದ ಬಾಧೆ ಕಂಡು ಬಂದಲ್ಲಿ Emamectin benzoate 0.5 ಗ್ರಾಂ ಪ್ರತಿ ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಸಿಂಪರಣೆ ಮಾಡಬೇಕು. ಸಿಂಪಡಣೆಯನ್ನು ಬೆಳಿಗ್ಗೆ 8 ರಿಂದ 10 ಗಂಟೆ ಒಳಗೆ ಹಾಗೂ ಸಂಜೆ 4 ರಿಂದ 6 ರ ಒಳಗೆ ಮಾಡುವುದು ಸೂಕ್ತ ಎಂದರು.

ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾಕ್ಟರ್ ದೇವರಾಜ ಟಿ ಎಂ ಮಾತನಾಡಿ, ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ಎಣ್ಣೆಕಾಳುಗಳ ಬೆಳೆಯ ಉತ್ಪಾದನೆ ಹಾಗೂ ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನಗಳು ಹಾಗೂ ಅಧಿಕ ಇಳುವರಿ ಕೊಡುವ ಹೊಸ ತಳಿ ಬಳಸುವುದರಿಂದ ಇಳುವರಿ ಹೆಚ್ಚಳವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರು ಹಾಗೂ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿಯಾರು ಭಾಗವಹಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top