ದಾವಣಗೆರೆ; ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿ ತೇಜಸ್ವಿ ಪಟೇಲ್ ಜೆಡಿಎಸ್ ಸೇರ್ಪಡೆ; ಚನ್ನಗಿರಿಯಲ್ಲಿ ಕಾಂಗ್ರೆಸ್ ಗೆ ಶಾಕ್ ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಟಿಕೆಟ್ ವಂಚಿತರ ಪಕ್ಷಾಂತರ ಪರ್ವ ಮುಂದುವರೆದಿದ್ದು, ಮಾಜಿ ಸಿಎಂ ದಿ. ಜೆ ಹೆಚ್ ಪಟೇಲ್ ಸಹೋದರನ ಪುತ್ರ ರೈತ ಮುಖಂಡ ಹಾಗೂ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದ ತೇಜಸ್ವಿ ಪಟೇಲ್ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದಾರೆ.

ತೇಜಸ್ವಿ ಪಟೇಲ್ ಅವರು ಹರಿಹರದ ಜೆಡಿಎಸ್ ಅಭ್ಯರ್ಥಿ ಹೆಚ್ ಎಸ್ ಶಿವಶಂಕರ್ ನಿವಾಸದಲ್ಲಿ ಜೆಡಿಎಎಸ್​ಗೆ ಸೇರ್ಪಡೆಯಾಗಿದ್ದಾರೆ. ತೇಜಸ್ವಿ ಪಟೇಲ್ ಜೆಡಿಎಸ್ ಸೇರ್ಪಡೆ ಹಿನ್ನೆಲೆ ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ.

ಮಾಯಕೊಂಡದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆನಂದಪ್ಪ ಜೆಡಿಎಸ್ ಅಭ್ಯರ್ಥಿಗಳಾಗಿಯಾಗಿದ್ದಾರೆ. ಚನ್ನಗಿರಿಯಲ್ಲಿ ತೇಜಸ್ವಿ ಪಟೇಲ್ ಸೇರ್ಪಡೆ ಬಳಿಕ ಚನ್ನಗಿರಿ ಟಿಕೆಟ್ ಸಿಗುವ ಸಾಧ್ಯತೆ ಇದೆ. ತೇಜಸ್ವಿ ಪಟೇಲ್ ಚನ್ನಗಿರಿ ಹಾಗು ಮಾಯಕೊಂಡ ಮತ ಕ್ಷೇತ್ರದಲ್ಲಿ ತನ್ನದೇ ಹಿಡಿತ ಹೊಂದಿರುವ ಜೆ ಹೆಚ್ ಪಟೇಲ್ ಕುಟುಂಬದ ನಡೆಯಿಂದ ಕಾಂಗ್ರೆಸ್ ಹಿನ್ನಡೆ ಆಗಲಿದೆ.ಕಾಂಗ್ರೆಸ್​ನಿಂದ‌ ಚನ್ನಗಿರಿಯಲ್ಲಿ ಶಿವಗಂಗಾ ಬಸವರಾಜ್ ಗೆ​ ಟಿಕೆಟ್ ನೀಡಲಾಗಿದೆ. ಹೀಗಾಗಿ ಪಟೇಲ್ ಪಕ್ಷ ತೊರೆದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *