Connect with us

Dvgsuddi Kannada | online news portal | Kannada news online

ದಾವಣಗೆರೆ; ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿ ತೇಜಸ್ವಿ ಪಟೇಲ್ ಜೆಡಿಎಸ್ ಸೇರ್ಪಡೆ; ಚನ್ನಗಿರಿಯಲ್ಲಿ ಕಾಂಗ್ರೆಸ್ ಗೆ ಶಾಕ್ ..!

ಚನ್ನಗಿರಿ

ದಾವಣಗೆರೆ; ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿ ತೇಜಸ್ವಿ ಪಟೇಲ್ ಜೆಡಿಎಸ್ ಸೇರ್ಪಡೆ; ಚನ್ನಗಿರಿಯಲ್ಲಿ ಕಾಂಗ್ರೆಸ್ ಗೆ ಶಾಕ್ ..!

ದಾವಣಗೆರೆ: ಟಿಕೆಟ್ ವಂಚಿತರ ಪಕ್ಷಾಂತರ ಪರ್ವ ಮುಂದುವರೆದಿದ್ದು, ಮಾಜಿ ಸಿಎಂ ದಿ. ಜೆ ಹೆಚ್ ಪಟೇಲ್ ಸಹೋದರನ ಪುತ್ರ ರೈತ ಮುಖಂಡ ಹಾಗೂ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದ ತೇಜಸ್ವಿ ಪಟೇಲ್ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದಾರೆ.

ತೇಜಸ್ವಿ ಪಟೇಲ್ ಅವರು ಹರಿಹರದ ಜೆಡಿಎಸ್ ಅಭ್ಯರ್ಥಿ ಹೆಚ್ ಎಸ್ ಶಿವಶಂಕರ್ ನಿವಾಸದಲ್ಲಿ ಜೆಡಿಎಎಸ್​ಗೆ ಸೇರ್ಪಡೆಯಾಗಿದ್ದಾರೆ. ತೇಜಸ್ವಿ ಪಟೇಲ್ ಜೆಡಿಎಸ್ ಸೇರ್ಪಡೆ ಹಿನ್ನೆಲೆ ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ.

ಮಾಯಕೊಂಡದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆನಂದಪ್ಪ ಜೆಡಿಎಸ್ ಅಭ್ಯರ್ಥಿಗಳಾಗಿಯಾಗಿದ್ದಾರೆ. ಚನ್ನಗಿರಿಯಲ್ಲಿ ತೇಜಸ್ವಿ ಪಟೇಲ್ ಸೇರ್ಪಡೆ ಬಳಿಕ ಚನ್ನಗಿರಿ ಟಿಕೆಟ್ ಸಿಗುವ ಸಾಧ್ಯತೆ ಇದೆ. ತೇಜಸ್ವಿ ಪಟೇಲ್ ಚನ್ನಗಿರಿ ಹಾಗು ಮಾಯಕೊಂಡ ಮತ ಕ್ಷೇತ್ರದಲ್ಲಿ ತನ್ನದೇ ಹಿಡಿತ ಹೊಂದಿರುವ ಜೆ ಹೆಚ್ ಪಟೇಲ್ ಕುಟುಂಬದ ನಡೆಯಿಂದ ಕಾಂಗ್ರೆಸ್ ಹಿನ್ನಡೆ ಆಗಲಿದೆ.ಕಾಂಗ್ರೆಸ್​ನಿಂದ‌ ಚನ್ನಗಿರಿಯಲ್ಲಿ ಶಿವಗಂಗಾ ಬಸವರಾಜ್ ಗೆ​ ಟಿಕೆಟ್ ನೀಡಲಾಗಿದೆ. ಹೀಗಾಗಿ ಪಟೇಲ್ ಪಕ್ಷ ತೊರೆದಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

Advertisement

ದಾವಣಗೆರೆ

Advertisement
To Top