ದಾವಣಗೆರೆ: ನಗರದ KSRTC ನಿಗಮದ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಹಿನ್ನೆಲೆ ಹೈಸ್ಕೂಲ್ ಮೈದಾನದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕವಾಗಿ KSRTC ಬಸ್ ನಿಲ್ದಾಣವನ್ನು ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸಂ.ಸವದಿ ಉದ್ಘಾಟಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಸ್.ಎ.ರವೀಂದ್ರನಾಥ, ಪ್ರೊ.ಲಿಂಗಣ್ಣ, ಜಿ.ಪಂ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಉಪ ಮೇಯರ್ ಸೌಮ್ಯ ನರೇಂದ್ರ ಕುಮಾರ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಟಿ.ವೀರೇಶ್, ಸಾರಿಗೆ ಮಂಡಳಿ ನಿರ್ದೇಶಕರುಗಳಾದ ರಾಜು, ಆರುಂಡಿ ನಾಗರಾಜ್, ರುದ್ರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಎಎಸ್ಪಿ ರಾಜೀವ್ ಮುಖ್ಯ ಇಂಜಿನಿಯರ್ ಜಗದೀಶ್ ಚಂದ್ರ ಇತರೆ ಅಧಿಕಾರಿಗಳು ಇದ್ದರು.



