ದಾವಣಗೆರೆ: ಆಯುರ್ವೇದ ಅಳಿಸಲಾಗದ ಚಿಕಿತ್ಸಾ ವಿಧಾನ; ತೋಟಗಾರಿಕೆ ವಿಜ್ಞಾನಿ ಬಸವನಗೌಡ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಆಯುರ್ವೇದವು ಜೀವನ ಮತ್ತು ಧೀರ್ಘಾಯಷ್ಯದ ವಿಜ್ಞಾನವಾಗಿದ್ದು, ವೈದ್ಯಕೀಯ ಪದ್ಧತಿಯಲ್ಲಿ ಅದ್ವೀತಿಯ ಮತ್ತು ಅಳಿಸಲಾಗದ ಚಿಕಿತ್ಸಾ ವಿಧಾನವೆಂದು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಬಸವನಗೌಡ ಎಂ.ಜಿ. ಅಭಿಪ್ರಾಯಪಟ್ಟರು.

ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ದಾವಣಗೆರೆ ಹಾಗೂ ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜ್ ಮತ್ತು ಸಂಶೋಧನಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ೮ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯಲ್ಲಿ ‘ಔಷಧಿ ಸಸ್ಯಗಳ ಪರಂಪರೆ’ ಕುರಿತು ಉಪನ್ಯಾಸ ನೀಡಿದರು.

ಪ್ರಾಚೀನ ಭಾರತದ ಕಾಲದಿಂದಲೂ ಆಯುರ್ವೇದ ಪದ್ಧತಿ ನಮ್ಮಲ್ಲಿ ಜಾರಿಯಿದ್ದು ಮಾರಕ ರೋಗಗಳು ಆಯುರ್ವೇದ ಪದ್ಧತಿಯಿಂದ ವಾಸಿಯಾಗಿದೆ. ಇಂದು ವಿಪರೀತ ವಿಷಯುಕ್ತ ಆಹಾರ ಸೇವನೆಯಿಂದ ದೇಹದಲ್ಲಿ ನಿರೋಧಕ ಶಕ್ತಿ ಕುಂದುತ್ತಿದೆ. ಈ ಸಂದರ್ಭದಲ್ಲಿ ಆಹಾರದಲ್ಲಿ ಸ್ಥಳೀಯ ಔಷಧಿ ಗುಣಗಳುಳ್ಳ ಸಸ್ಯಗಳನ್ನು ಬಳಸುವುದರಿಂದ ದೇಹದಲ್ಲಿ ಚೈತನ್ಯ ಹೆಚ್ಚುವುದಲ್ಲದೇ ರೋಗದಿಂದ ಮುಕ್ತ್ತಿಹೊಂದಬಹುದು.

ಭಾರತ ವೈದ್ಯಕೀಯ ಸಸ್ಯಗಳ ಕಣಜವಾಗಿದ್ದು, ಸುಮಾರು ೭,೦೦೦ ಕ್ಕೂ ಹೆಚ್ಚು ಪ್ರಭೇದಗಳು ನಮ್ಮಲ್ಲಿದೆ. ಇವುಗಳ ಬಳಕೆ ಮತ್ತು ಸಂಶೋಧನೆ ನಮ್ಮಲ್ಲಿ ಇನ್ನೂ ಹೆಚ್ಚು ಮಟ್ಟದಲ್ಲಿ ಆದರೆ ಆಯುರ್ವೇದ ಪದ್ಧತಿ ಮುನ್ನಡೆಗೆ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಕೇಂದ್ರದ ಮುಖ್ಯಸ್ಥ ಡಾ. ದೇವರಾಜ ಟಿ.ಎನ್. ರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ನಗರದಲ್ಲಿ ಬೀದಿಗೊಂದು ಔಷಧಿ ಅಂಗಡಿ ಮತ್ತು ಆಸ್ಪತ್ರೆ ತೆರೆಯುತ್ತಿದೆ. ಇದು ಸಮಾಜಕ್ಕೆ ಒಳಿತಲ್ಲ ಯುವ ಜನತೆ ಉತ್ತಮ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ಹೊಂದಬಹುದೆAದು ಕರೆ ನೀಡಿದರು.

ಸುಶ್ರುತ ಆಯುರ್ವೇದ ಕಾಲೇಜಿನ ಉಪನ್ಯಾಸಕಿ ಡಾ. ಹೇಮಶ್ರೀ, ವಿವಿಧ ಚಿಕಿತ್ಸಾಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿಜ್ಞಾನಿಗಳಾದ ಮಲ್ಲಿಕಾರ್ಜುನ ಬಿ.ಓ., ಶ್ರೀ ರಘುರಾಜ ಜೆ., ಡಾ. ಜಯದೇವಪ್ಪ ಜಿ.ಕೆ., ಶ್ರೀ ಸಣ್ಣಗೌಡ್ರ ಹೆಚ್. ಎಂ., ಡಾ. ಅವಿನಾಶ್ ಟಿ.ಜಿ. ಹಾಗೂ 60ಕ್ಕೂ ಆಯುರ್ವೇದ ವಿಧ್ಯಾರ್ಥಿಗಳು ಭಾಗವಹಿಸಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *