ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ; ಬಾಕಿ ಪ್ರಕರಣಗಳ ಶೇ.50ರಷ್ಟು ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ನಾಳೆಯೇ ಕೊನೆ ದಿನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಸಂಚಾರ ನಿಯಮಗಳ ಉಲ್ಲಂಘನೆಯ ಇ-ಚಲನ್ ದಂಡವನ್ನು ಪಾವತಿಸದೇ ಬಾಕಿ ಪ್ರಕರಣಗಳಿಗೆ ಶೇ.50 ರಷ್ಟು ರಿಯಾಯತಿ ದಂಡವನ್ನು ಪಾವತಿಸಲು ನಾಳೆಯೇ (ಡಿ.12) ಕೊನೆಯ ದಿನ.

ದಾವಣಗೆರೆ: 10 ದಿನದ ಬಳಿಕ ಅಡಿಕೆ ದರ ದಿಢೀರ್ ಏರಿಕೆ | ಇಂದಿನ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?

ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಈ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ರಿಯಾಯಿತಿಯನ್ನು ನೀಡಿ ಆದೇಶಿಸಿರುತ್ತದೆ.

ಸಂಚಾರ ನಿಯಮಗಳ ಉಲ್ಲಂಘನೆಯ ಇ-ಚಲನ್ ದಂಡವನ್ನು ಪಾವತಿಸಲು ಶೇ 50% ರಷ್ಟು ಈ ಆದೇಶವು ದಿನಾಂಕ: 23.08.2025 ರಿಂದ 12.09.2025 ರವರೆಗೆ ಜಾರಿಯಲ್ಲಿರುತ್ತದೆ. ಸಂಚಾರ ನಿಯಮಗಳ ಉಲ್ಲಂಘನೆಯ ಇ-ಚಲನ್ ದಂಡವನ್ನು ಪಾವತಿಸದೇ ಇರುವ ಪ್ರಕರಣಗಳಿಗೆ ಶೇ.50 ರಷ್ಟು ರಿಯಾಯತಿ ದಂಡವನ್ನು ಪಾವತಿಸಲು ನಾಳೆ ದಿನಾಂಕ 12-12-2025 ರಂದು ಕೊನೆ ದಿನವಾಗಿದ್ದು ಕೂಡಲೇ ಈ ಕೆಳಕಂಡ ಸ್ಥಳಗಳಲ್ಲಿ ದಂಡವನ್ನು ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿರುತ್ತದೆ.

ದಾವಣಗೆರೆ: ಆಟೋ ಪರ್ಮಿಟ್ ನಿಲ್ಲಿಸುವಂತೆ ಒತ್ತಾಯ; ಕಾರಣ ಏನು.‌?

ಬಾಕಿ ಇರುವ ಇ-ಚಲನ್ ದಂಡ ಪಾವತಿಸುವ ಸ್ಥಳಗಳು

1. ಪೋಸ್ಟ್ ಆಫೀಸ್ ಗಳಿಗೆ ಬೇಟಿ ನೀಡಿ ಪಾವತಿಸಬಹುದಾಗಿದೆ.

2. ದಾವಣಗೆರೆ ನಗರದ ಉತ್ತರ ಸಂಚಾರಿ ಪೊಲೀಸ್ ಠಾಣೆ, ದಕ್ಷಿಣ ಸಂಚಾರ ಠಾಣೆ, ಆರ್.ಟಿ.ಓ ಕಛೇರಿ ವೃತ್ತ, ಎಸಿ ಕಛೇರಿ ವೃತ್ತ, ಅರುಣ ವೃತ್ತ ( ಸಂಚಾರ ವೃತ್ತ ಕಛೇರಿ), ಸಂಗೊಳ್ಳಿ ರಾಯಣ್ಣ ವೃತ್ತ, ನಿಜಲಿಂಗಪ್ಪ ಬಡಾವಣೆ ಬಳಿ ಕರ್ನಲ್ ರವೀಂದ್ರನಾಥ ವೃತ್ತ (ಟವರ್ ಕ್ಲಾಕ್ ವೃತ್ತ), ಡೆಂಟಲ್ ಕಾಲೇಜ್ ರಸ್ತೆ, ಬಾಡಾ ಕ್ರಾಸ್, ರಾಮ & ಕೋ ವೃತ್ತ, ಹೈಸ್ಕೂಲ್ ಮೈದಾನ ಗಳಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳ ಬಳಿ ಬೇಟಿ ನೀಡಿ ಇ-ಚಲನ್ ದಂಡವನ್ನು ಪಾವತಿಸಬಹುದಾಗಿದೆ.

3. ಮೇಲ್ಕಂಡ ಸ್ಥಳಗಳಲ್ಲಿ ಅಲ್ಲದೇ ಜಿಲ್ಲೆಯ ಯಾವುದೇ ಪೊಲೀಸ್ ಠಾಣೆ ಬೇಟಿ ನೀಡಿ ತಮ್ಮ ವಾಹನಗಳ ಮೇಲೆ ಇರುವ ಇ-ಚಲನ್ ಬಾಕಿ ಇರುವ ದಂಡವನ್ನು ಪರಿಶೀಲಿಸಿ ಪಾವತಿಸಬಹುದಾಗಿದೆ.

ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಲು ಸೂಚನೆ

ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ 50% ರಿಯಾಯಿತಿ ಯ ಕೊಡುಗೆಯಲ್ಲಿ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಗೆ ಬೇಟಿ ನೀಡಿ ತಮ್ಮ ವಾಹನಗಳ ಮೇಲೆ ಇದ್ದಂತಹ ಇ-ಚಲನ್ ದಂಡವನ್ನು ಪಾವತಿಸುತ್ತಿದ್ದು, ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ 50% ರಿಯಾಯಿತಿ ಯ ಕೊಡುಗೆಯ ನಾಳೆ ಕೊನೆ ದಿನವಾಗಿದ್ದು ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *